ಹೊಸದಿಲ್ಲಿ: ಸಂವಿಧಾನ ಪೀಠಿಕೆಯ ಸಮಾಜವಾದಿ(ಸೋಶಿಯಲಿಸ್ಟ್) ಹಾಗೂ ಜಾತ್ಯತೀತ (ಸೆಕ್ಯೂಲರ್) ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನ ಪೀಠಿಕೆಗೂ ವಿಸ್ತರಿಸುತ್ತದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹಿರಿಯ ಬಿಜೆಪಿ ನಾಯಕರಾದ ಡಾ.ಸುಬ್ರಮಣಿಯನ್ ಸ್ವಾಮಿ, ಬಲರಾಮ್ ಸಿಂಗ್ ಹಾಗೂ ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಂವಿಧಾನ ಪೀಠಿಕೆಯಲ್ಲಿರುವ ಸಮಾಜವಾದಿ ಹಾಗೂ ಜಾತ್ಯತೀತ ಪದಗಳ ಸೇರ್ಪಡೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು (ನ.25) ವಿಚಾರಣೆ ನಡೆಸಿದ ಸಿಜೆಐನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಪಿ.ವಿ.ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ನ್ಯಾಯಪೀಠವೂ ಸಂವಿಧಾನದ 368ನೇ ವಿಧಿಯ ಅಡಿಯಲ್ಲಿ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿನ ʼಅವಿವಾದಾತೀತʼ ಅಧಿಕಾರ
ಸಂವಿಧಾನದ ಪೀಠಿಕೆಗೂ ವಿಸ್ತರಿಸುವ ಕಾರಣ ಈ ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಪುನರುಚ್ಚಾರ ಮಾಡಿ ಅರ್ಜಿಯನ್ನು ವಜಾಗೊಳಿಸಿದೆ.
ಇನ್ನು 1976ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರು ಭಾರತ ಸಂವಿಧಾನಕ್ಕೆ 42ನೇ ತಿದ್ದುಪಡಿಯ ಮೂಲಕ ಸಮಾಜವಾದಿ ಹಾಗೂ ಜ್ಯಾತತೀತ ಪದಗಳನ್ನು ಸೇರಿಸಿದ್ದಾರೆ. ಈ ಪದಗಳು ಸಂವಿಧಾನ ಪೀಠಿಕೆಯ 1949ರ ನವೆಂಬರ್ 26ರ ದಿನಾಂಕದ ಮೂಲವನ್ನು ಒಳಗೊಂಡಿದೆ. ಅಲ್ಲದೇ ಈ ಪದಗಳನ್ನು ಸ್ವೀಕರಿಸಿದ ದಿನಾಂಕವು ಸಂವಿಧಾನದ 368ನೇ ವಿಧಿಯ ಅಡಿಯಲ್ಲಿ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲ ಅಥವಾ ನಿರ್ಬಂಧಿಸುವುದಿಲ್ಲ. ಹೀಗಾಗಿ ಅವುಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಆದೇಶ ಹೊರಡಿಸಿದೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…