ನವದೆಹಲಿ: ಕಾಂಗ್ರೆಸ್ ನಾಯಕ ಶಶಿ ತರೂರ್ ಕೆಲಸಕ್ಕೆ ಹೋಗುವ, ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ಕೊಟ್ಟಿದ್ದಾರೆ.
ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮುಟ್ಟು ಮಹಿಳೆಯರ ಕೆಲಸಕ್ಕೆ ಎಂದಿಗೂ ಅಡ್ಡಿಯಾಗುವುದಿಲ್ಲ. ಅದು ಮಹಿಳೆಯರ ಜೀವನದ ಒಂದು ಭಾಗ ಮತ್ತು ಸಹಜ ಕ್ರಿಯೆ. ಇದಕ್ಕೆಲ್ಲ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ.
ಅಲ್ಲದೇ, ವೇತನ ಸಹಿತ ಮುಟ್ಟಿನ ರಜೆ ನೀಡಬೇಕು ಎಂದು ಎಲ್ಲಿಂದಲೂ ಸರ್ಕಾರದ ಪರಿಗಣನೆಗೆ ಬಂದಿಲ್ಲ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ, ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…