ಅಯೋಧ್ಯೆ: ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರವನ್ನು ಉದ್ಘಾಟಿಸಿ, ಬಾಲರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾ ನೆರವೇರಿಸಿ ಪ್ರಧಾನಿ ಮೋದಿ ಮಾತನಾಡಿದ ಅವರು, ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ ಎಂದರು.
ನಾನಿಂದು ಭಗವಾನ್ ಶ್ರೀರಾಮನಲ್ಲಿ ಕ್ಷಮೆಯಾಚಿಸುತ್ತೇನೆ. ಏಕೆಂದರೆ, ನಮ್ಮ ಪ್ರಯತ್ನ, ತ್ಯಾಗ ಮತ್ತು ತಪಸ್ಸಿನಲ್ಲಿ ಏನಾದರೂ ಕೊರತೆಯಿರಬೇಕು. ಹೀಗಾಗಿ ಇಷ್ಟು ಶತಮಾನಗಳಿಂದ ರಾಮ ಮಂದಿರ ನಿರ್ಮಾಣ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಆ ಕೆಲಸ ಇಂದು ಪೂರ್ಣಗೊಂಡಿದೆ ಎಂದು ಹೇಳಿದರು.
ಭಗವಾನ್ ರಾಮನ ಅಸ್ತಿತ್ವಕ್ಕಾಗಿ ದಶಕಗಳ ಕಾಲ ಕಾನೂನು ಹೋರಾಟ ನಡೆಯಿತು. ನ್ಯಾಯ ಸಲ್ಲಿಸಿದ ಭಾರತದ ನ್ಯಾಯಾಂಗಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ.
ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್ ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಪ್ರಧಾನಿ ಮೋದಿ ಹೇಳಿದರು.
ಕಾಲ ಚಕ್ರ ಬದಲಾಗುತ್ತಿರುವುದು ನನಗೆ ಗೊತ್ತಿದೆ. ಬದಲಾದ ಕಾಲಚಕ್ರದ ಶಿಲ್ಪಿಗಳಾಗಿ ನಾವು ಆಯ್ಕೆಯಾಗಿದ್ದೇವೆ. ಮುಂದಿನ ಸಾವಿರಾರು ವರ್ಷದ ಅಡಿಪಾಯ ಈಗ ಹಾಕಬೇಕು. ಸಮಸ್ತ ಸಕ್ಷಮ, ಭವ್ಯ ದಿವ್ಯ ಭಾರತ ನಿರ್ಮಾಣದ ಪ್ರಮಾಣ ಮಾಡೋಣ ಎಂದು ಪ್ರಧಾನಿ ಮೋದಿ ತಿಳಿಸಿದರು.
ಕೇವಲ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಲ್ಲ. ದೇಶದ ಸಾಂಸ್ಕೃತಿಕ ಮೌಲ್ಯಗಳ ಪ್ರಾಣ ಪ್ರತಿಷ್ಠೆಯಾಗಿದೆ. ರಾಮಮಂದಿರ ರಾಷ್ಟ್ರಚೇತನದ ಮಂದಿರ. ರಾಮ ಭಾರತದ ಆತ್ಮ ಚೇತನ, ಚಿಂತನ ರಾಮ ನೀತಿಯೂ ಹೌದು ಎಂದು ಹೇಳಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…