ರಾಷ್ಟ್ರೀಯ

ನಮ್ಮ ತ್ಯಾಗ ಮತ್ತು ತಪಸ್ಸಿನಲ್ಲಿ ಏನಾದರೂ ಕೊರತೆಯಿರಬೇಕು ಹೀಗಾಗಿ ರಾಮ ಮಂದಿರ ಕಟ್ಟಲಾಗಿರಲಿಲ್ಲ: ಮೋದಿ

ಅಯೋಧ್ಯೆ: ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರವನ್ನು ಉದ್ಘಾಟಿಸಿ, ಬಾಲರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾ ನೆರವೇರಿಸಿ ಪ್ರಧಾನಿ ಮೋದಿ ಮಾತನಾಡಿದ ಅವರು, ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ ಎಂದರು.

ನಾನಿಂದು ಭಗವಾನ್ ಶ್ರೀರಾಮನಲ್ಲಿ ಕ್ಷಮೆಯಾಚಿಸುತ್ತೇನೆ. ಏಕೆಂದರೆ, ನಮ್ಮ ಪ್ರಯತ್ನ, ತ್ಯಾಗ ಮತ್ತು ತಪಸ್ಸಿನಲ್ಲಿ ಏನಾದರೂ ಕೊರತೆಯಿರಬೇಕು. ಹೀಗಾಗಿ ಇಷ್ಟು ಶತಮಾನಗಳಿಂದ ರಾಮ ಮಂದಿರ ನಿರ್ಮಾಣ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಆ ಕೆಲಸ ಇಂದು ಪೂರ್ಣಗೊಂಡಿದೆ ಎಂದು  ಹೇಳಿದರು.

ಭಗವಾನ್ ರಾಮನ ಅಸ್ತಿತ್ವಕ್ಕಾಗಿ ದಶಕಗಳ ಕಾಲ ಕಾನೂನು ಹೋರಾಟ ನಡೆಯಿತು. ನ್ಯಾಯ ಸಲ್ಲಿಸಿದ ಭಾರತದ ನ್ಯಾಯಾಂಗಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ.

ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​​ ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಾಲ ಚಕ್ರ ಬದಲಾಗುತ್ತಿರುವುದು ನನಗೆ ಗೊತ್ತಿದೆ. ಬದಲಾದ ಕಾಲಚಕ್ರದ ಶಿಲ್ಪಿಗಳಾಗಿ ನಾವು ಆಯ್ಕೆಯಾಗಿದ್ದೇವೆ. ಮುಂದಿನ ಸಾವಿರಾರು ವರ್ಷದ ಅಡಿಪಾಯ ಈಗ ಹಾಕಬೇಕು.  ಸಮಸ್ತ ಸಕ್ಷಮ, ಭವ್ಯ ದಿವ್ಯ ಭಾರತ ನಿರ್ಮಾಣದ ಪ್ರಮಾಣ ಮಾಡೋಣ  ಎಂದು ಪ್ರಧಾನಿ ಮೋದಿ ತಿಳಿಸಿದರು.

ಕೇವಲ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಲ್ಲ. ದೇಶದ ಸಾಂಸ್ಕೃತಿಕ ಮೌಲ್ಯಗಳ ಪ್ರಾಣ ಪ್ರತಿಷ್ಠೆಯಾಗಿದೆ. ರಾಮಮಂದಿರ ರಾಷ್ಟ್ರಚೇತನದ ಮಂದಿರ. ರಾಮ ಭಾರತದ ಆತ್ಮ ಚೇತನ,  ಚಿಂತನ ರಾಮ ನೀತಿಯೂ ಹೌದು ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago