ರಾಷ್ಟ್ರೀಯ

ನಮ್ಮ ತ್ಯಾಗ ಮತ್ತು ತಪಸ್ಸಿನಲ್ಲಿ ಏನಾದರೂ ಕೊರತೆಯಿರಬೇಕು ಹೀಗಾಗಿ ರಾಮ ಮಂದಿರ ಕಟ್ಟಲಾಗಿರಲಿಲ್ಲ: ಮೋದಿ

ಅಯೋಧ್ಯೆ: ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರವನ್ನು ಉದ್ಘಾಟಿಸಿ, ಬಾಲರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾ ನೆರವೇರಿಸಿ ಪ್ರಧಾನಿ ಮೋದಿ ಮಾತನಾಡಿದ ಅವರು, ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ ಎಂದರು.

ನಾನಿಂದು ಭಗವಾನ್ ಶ್ರೀರಾಮನಲ್ಲಿ ಕ್ಷಮೆಯಾಚಿಸುತ್ತೇನೆ. ಏಕೆಂದರೆ, ನಮ್ಮ ಪ್ರಯತ್ನ, ತ್ಯಾಗ ಮತ್ತು ತಪಸ್ಸಿನಲ್ಲಿ ಏನಾದರೂ ಕೊರತೆಯಿರಬೇಕು. ಹೀಗಾಗಿ ಇಷ್ಟು ಶತಮಾನಗಳಿಂದ ರಾಮ ಮಂದಿರ ನಿರ್ಮಾಣ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಆ ಕೆಲಸ ಇಂದು ಪೂರ್ಣಗೊಂಡಿದೆ ಎಂದು  ಹೇಳಿದರು.

ಭಗವಾನ್ ರಾಮನ ಅಸ್ತಿತ್ವಕ್ಕಾಗಿ ದಶಕಗಳ ಕಾಲ ಕಾನೂನು ಹೋರಾಟ ನಡೆಯಿತು. ನ್ಯಾಯ ಸಲ್ಲಿಸಿದ ಭಾರತದ ನ್ಯಾಯಾಂಗಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ.

ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​​ ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಾಲ ಚಕ್ರ ಬದಲಾಗುತ್ತಿರುವುದು ನನಗೆ ಗೊತ್ತಿದೆ. ಬದಲಾದ ಕಾಲಚಕ್ರದ ಶಿಲ್ಪಿಗಳಾಗಿ ನಾವು ಆಯ್ಕೆಯಾಗಿದ್ದೇವೆ. ಮುಂದಿನ ಸಾವಿರಾರು ವರ್ಷದ ಅಡಿಪಾಯ ಈಗ ಹಾಕಬೇಕು.  ಸಮಸ್ತ ಸಕ್ಷಮ, ಭವ್ಯ ದಿವ್ಯ ಭಾರತ ನಿರ್ಮಾಣದ ಪ್ರಮಾಣ ಮಾಡೋಣ  ಎಂದು ಪ್ರಧಾನಿ ಮೋದಿ ತಿಳಿಸಿದರು.

ಕೇವಲ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಲ್ಲ. ದೇಶದ ಸಾಂಸ್ಕೃತಿಕ ಮೌಲ್ಯಗಳ ಪ್ರಾಣ ಪ್ರತಿಷ್ಠೆಯಾಗಿದೆ. ರಾಮಮಂದಿರ ರಾಷ್ಟ್ರಚೇತನದ ಮಂದಿರ. ರಾಮ ಭಾರತದ ಆತ್ಮ ಚೇತನ,  ಚಿಂತನ ರಾಮ ನೀತಿಯೂ ಹೌದು ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago