ತಿರುಪತಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಉದ್ಘಾಟನೆಗೆ ತಿರುಪತಿಯಿಂದ 1 ಲಕ್ಷ ಲಾಡುಗಳನ್ನು ಪೂರೈಸಲಾಗುವುದು ಎಂದು ಟಿಟಿಡಿ ಆಡಳಿತಾಧಿಕಾರಿ ತಿಳಿಸಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ಆಗಮಿಸುವ ಭಕ್ತಾದಿಗಳಿಗೆ ಹಂಚಲು ಈ ಲಾಡುಗಳನ್ನು ನೀಡಲಾಗುತ್ತಿದ್ದು, ಪ್ರತಿ ಲಾಡು 25 ಗ್ರಾಂ ಇರಲಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿರುಪತಿಗೆ 10 ದಿನದಲ್ಲಿ ₹40 ಕೋಟಿ ಕಾಣಿಕೆ : ವೈಕುಂಠ ಏಕಾದಶಿ ಸಂದರ್ಭದಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ 10 ದಿನಗಳ ಕಾಲ ವೈಕುಂಠದ್ವಾರ ದರ್ಶನ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ₹40 ಕೋಟಿ ಹಣ ಕಾಣಿಕೆಯಾಗಿ ಬಂದಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧಿಕಾರಿ ತಿಳಿಸಿದ್ದಾರೆ.
ಟಿಟಿಡಿಯು 36 ಲಕ್ಷ ಲಾಡುಗಳನ್ನು ಮಾರಾಟ ಮಾಡಿದೆ. 2 ಲಕ್ಷಕ್ಕೂ ಹೆಚ್ಚು ಭಕ್ತರು ಮುಡಿ ಅರ್ಪಿಸಿದ್ದಾರೆ. ದಾಖಲೆಯ ಸಂಖ್ಯೆಯಲ್ಲಿ 6.47 ಲಕ್ಷ ಭಕ್ತರು ವೈಕುಂಠದ್ವಾರ ದರ್ಶನ ಪಡೆದರು ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ತಿಳಿಸಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…