ತಿರುಪತಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಉದ್ಘಾಟನೆಗೆ ತಿರುಪತಿಯಿಂದ 1 ಲಕ್ಷ ಲಾಡುಗಳನ್ನು ಪೂರೈಸಲಾಗುವುದು ಎಂದು ಟಿಟಿಡಿ ಆಡಳಿತಾಧಿಕಾರಿ ತಿಳಿಸಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ಆಗಮಿಸುವ ಭಕ್ತಾದಿಗಳಿಗೆ ಹಂಚಲು ಈ ಲಾಡುಗಳನ್ನು ನೀಡಲಾಗುತ್ತಿದ್ದು, ಪ್ರತಿ ಲಾಡು 25 ಗ್ರಾಂ ಇರಲಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿರುಪತಿಗೆ 10 ದಿನದಲ್ಲಿ ₹40 ಕೋಟಿ ಕಾಣಿಕೆ : ವೈಕುಂಠ ಏಕಾದಶಿ ಸಂದರ್ಭದಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ 10 ದಿನಗಳ ಕಾಲ ವೈಕುಂಠದ್ವಾರ ದರ್ಶನ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ₹40 ಕೋಟಿ ಹಣ ಕಾಣಿಕೆಯಾಗಿ ಬಂದಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧಿಕಾರಿ ತಿಳಿಸಿದ್ದಾರೆ.
ಟಿಟಿಡಿಯು 36 ಲಕ್ಷ ಲಾಡುಗಳನ್ನು ಮಾರಾಟ ಮಾಡಿದೆ. 2 ಲಕ್ಷಕ್ಕೂ ಹೆಚ್ಚು ಭಕ್ತರು ಮುಡಿ ಅರ್ಪಿಸಿದ್ದಾರೆ. ದಾಖಲೆಯ ಸಂಖ್ಯೆಯಲ್ಲಿ 6.47 ಲಕ್ಷ ಭಕ್ತರು ವೈಕುಂಠದ್ವಾರ ದರ್ಶನ ಪಡೆದರು ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…