ತಿರುಪತಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಉದ್ಘಾಟನೆಗೆ ತಿರುಪತಿಯಿಂದ 1 ಲಕ್ಷ ಲಾಡುಗಳನ್ನು ಪೂರೈಸಲಾಗುವುದು ಎಂದು ಟಿಟಿಡಿ ಆಡಳಿತಾಧಿಕಾರಿ ತಿಳಿಸಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ಆಗಮಿಸುವ ಭಕ್ತಾದಿಗಳಿಗೆ ಹಂಚಲು ಈ ಲಾಡುಗಳನ್ನು ನೀಡಲಾಗುತ್ತಿದ್ದು, ಪ್ರತಿ ಲಾಡು 25 ಗ್ರಾಂ ಇರಲಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿರುಪತಿಗೆ 10 ದಿನದಲ್ಲಿ ₹40 ಕೋಟಿ ಕಾಣಿಕೆ : ವೈಕುಂಠ ಏಕಾದಶಿ ಸಂದರ್ಭದಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ 10 ದಿನಗಳ ಕಾಲ ವೈಕುಂಠದ್ವಾರ ದರ್ಶನ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ₹40 ಕೋಟಿ ಹಣ ಕಾಣಿಕೆಯಾಗಿ ಬಂದಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧಿಕಾರಿ ತಿಳಿಸಿದ್ದಾರೆ.
ಟಿಟಿಡಿಯು 36 ಲಕ್ಷ ಲಾಡುಗಳನ್ನು ಮಾರಾಟ ಮಾಡಿದೆ. 2 ಲಕ್ಷಕ್ಕೂ ಹೆಚ್ಚು ಭಕ್ತರು ಮುಡಿ ಅರ್ಪಿಸಿದ್ದಾರೆ. ದಾಖಲೆಯ ಸಂಖ್ಯೆಯಲ್ಲಿ 6.47 ಲಕ್ಷ ಭಕ್ತರು ವೈಕುಂಠದ್ವಾರ ದರ್ಶನ ಪಡೆದರು ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…