ಉತ್ತರಪ್ರದೇಶ : ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ. ಅಲ್ಲದೇ, ರಾಮಮಂದಿರ ಉದ್ಘಾಟನೆಗೆ ನಮಗೆ ಇನ್ನೂ ಆಹ್ವಾನ ಬಂದಿಲ್ಲವೆಂದು ಬೇಸರಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಹೀಗೆ ಮಾತು ಮುಂದುವರಿಸಿ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಅಯೋಧ್ಯೆ ದೇವಸ್ಥಾನದ ಸುತ್ತಮುತ್ತಲು ನಡೆದಿರುವ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ.
ಹಲವು ವರ್ಷಗಳ ಹಿಂದೆ, ರಾಮಾಯಣದಲ್ಲಿ ವಿಮಾನವನ್ನು ಉಲ್ಲೇಖಿಸಲಾಗಿತ್ತು. ಪುಷ್ಪಕ ವಿಮಾನದಲ್ಲಿ ರಾಮ ಅಯೋಧ್ಯೆಗೆ ಬಂದ ಎನ್ನಲಾಗಿತ್ತು. ಇದೀಗ ಅಯೋಧ್ಯೆಯಲ್ಲಿ ಏರ್ಪೋರ್ಟ್ ಉದ್ಘಾಟನೆಯಾಗಿದೆ. ಅದಕ್ಕೆ ನಾವು ಮಹರ್ಷಿ ವಾಲ್ಮೀಕಿ ಏರ್ಪೋರ್ಟ್ ಎಂದು ನಾಮಕರಣ ಮಾಡಿದ್ದೇವೆ ಎಂದಿದ್ದಾರೆ.
ಅಲ್ಲದೇ, ನೀವು ಅಯೋಧ್ಯೆಗೆ ಬಂದರೆ, ತ್ರೇತಾಯುಗಕ್ಕೆ ಮರಳಿದಂತೆ ನಿಮಗೆ ಭಾಸವಾಗುತ್ತದೆ ಎಂದಿದ್ದಾರೆ. ಇನ್ನು ರೈಲ್ವೆ ನಿಲ್ದಾಣ ಉದ್ಘಾಟನೆಯಾಗಿದ್ದು, ಜಲ ಸಂಪರ್ಕದ ಬಗ್ಗೆಯೂ ಯೋಚಿಸಲಾಗಿದೆ ಎಂದಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…