ಉತ್ತರಪ್ರದೇಶ : ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ. ಅಲ್ಲದೇ, ರಾಮಮಂದಿರ ಉದ್ಘಾಟನೆಗೆ ನಮಗೆ ಇನ್ನೂ ಆಹ್ವಾನ ಬಂದಿಲ್ಲವೆಂದು ಬೇಸರಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಹೀಗೆ ಮಾತು ಮುಂದುವರಿಸಿ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಅಯೋಧ್ಯೆ ದೇವಸ್ಥಾನದ ಸುತ್ತಮುತ್ತಲು ನಡೆದಿರುವ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ.
ಹಲವು ವರ್ಷಗಳ ಹಿಂದೆ, ರಾಮಾಯಣದಲ್ಲಿ ವಿಮಾನವನ್ನು ಉಲ್ಲೇಖಿಸಲಾಗಿತ್ತು. ಪುಷ್ಪಕ ವಿಮಾನದಲ್ಲಿ ರಾಮ ಅಯೋಧ್ಯೆಗೆ ಬಂದ ಎನ್ನಲಾಗಿತ್ತು. ಇದೀಗ ಅಯೋಧ್ಯೆಯಲ್ಲಿ ಏರ್ಪೋರ್ಟ್ ಉದ್ಘಾಟನೆಯಾಗಿದೆ. ಅದಕ್ಕೆ ನಾವು ಮಹರ್ಷಿ ವಾಲ್ಮೀಕಿ ಏರ್ಪೋರ್ಟ್ ಎಂದು ನಾಮಕರಣ ಮಾಡಿದ್ದೇವೆ ಎಂದಿದ್ದಾರೆ.
ಅಲ್ಲದೇ, ನೀವು ಅಯೋಧ್ಯೆಗೆ ಬಂದರೆ, ತ್ರೇತಾಯುಗಕ್ಕೆ ಮರಳಿದಂತೆ ನಿಮಗೆ ಭಾಸವಾಗುತ್ತದೆ ಎಂದಿದ್ದಾರೆ. ಇನ್ನು ರೈಲ್ವೆ ನಿಲ್ದಾಣ ಉದ್ಘಾಟನೆಯಾಗಿದ್ದು, ಜಲ ಸಂಪರ್ಕದ ಬಗ್ಗೆಯೂ ಯೋಚಿಸಲಾಗಿದೆ ಎಂದಿದ್ದಾರೆ.
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…