ರಾಷ್ಟ್ರೀಯ

ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು ಆಹ್ವಾನ ಬಯಸುತ್ತಿದ್ದಾರೆ : ಯೋಗಿ

ಉತ್ತರಪ್ರದೇಶ : ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ. ಅಲ್ಲದೇ, ರಾಮಮಂದಿರ ಉದ್ಘಾಟನೆಗೆ ನಮಗೆ ಇನ್ನೂ ಆಹ್ವಾನ ಬಂದಿಲ್ಲವೆಂದು ಬೇಸರಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಹೀಗೆ ಮಾತು ಮುಂದುವರಿಸಿ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಅಯೋಧ್ಯೆ ದೇವಸ್ಥಾನದ ಸುತ್ತಮುತ್ತಲು ನಡೆದಿರುವ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ.

ಹಲವು ವರ್ಷಗಳ ಹಿಂದೆ, ರಾಮಾಯಣದಲ್ಲಿ ವಿಮಾನವನ್ನು ಉಲ್ಲೇಖಿಸಲಾಗಿತ್ತು. ಪುಷ್ಪಕ ವಿಮಾನದಲ್ಲಿ ರಾಮ ಅಯೋಧ್ಯೆಗೆ ಬಂದ ಎನ್ನಲಾಗಿತ್ತು. ಇದೀಗ ಅಯೋಧ್ಯೆಯಲ್ಲಿ ಏರ್ಪೋರ್ಟ್ ಉದ್ಘಾಟನೆಯಾಗಿದೆ. ಅದಕ್ಕೆ ನಾವು ಮಹರ್ಷಿ ವಾಲ್ಮೀಕಿ ಏರ್ಪೋರ್ಟ್ ಎಂದು ನಾಮಕರಣ ಮಾಡಿದ್ದೇವೆ ಎಂದಿದ್ದಾರೆ.

ಅಲ್ಲದೇ, ನೀವು ಅಯೋಧ್ಯೆಗೆ ಬಂದರೆ, ತ್ರೇತಾಯುಗಕ್ಕೆ ಮರಳಿದಂತೆ ನಿಮಗೆ ಭಾಸವಾಗುತ್ತದೆ ಎಂದಿದ್ದಾರೆ. ಇನ್ನು ರೈಲ್ವೆ ನಿಲ್ದಾಣ ಉದ್ಘಾಟನೆಯಾಗಿದ್ದು, ಜಲ ಸಂಪರ್ಕದ ಬಗ್ಗೆಯೂ ಯೋಚಿಸಲಾಗಿದೆ ಎಂದಿದ್ದಾರೆ.

andolanait

Recent Posts

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

26 mins ago

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…

28 mins ago

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…

1 hour ago

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…

1 hour ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…

2 hours ago

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

3 hours ago