ರಾಷ್ಟ್ರೀಯ

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ತ.ನಾಡು ಸರ್ಕಾರ ನೇರಪ್ರಸಾರ ವೀಕ್ಷಣೆ ನಿಷೇಧಿಸಿದೆ ಎಂದು ಆಕ್ರೋಶ ಹೊರಹಾಕಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ( ಜನವರಿ 21 ) ಎಕ್ಸ್‌ ಖಾತೆಯಲ್ಲಿ ತಮಿಳುನಾಡು ಸರ್ಕಾರ ಜನವರಿ 22ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಯನ್ನು ನಿಷೇಧಿಸಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ತಮಿಳು ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಸುದ್ದಿಯೊಂದರ ಫೋಟೊ ಹಂಚಿಕೊಳ್ಳುವ ಮೂಲಕ ನಿರ್ಮಲಾ ಸೀತಾರಾಮನ್‌ ಈ ರೀತಿ ಟ್ವೀಟ್‌ ಮಾಡಿದ್ದಾರೆ.

ತಮಿಳುನಾಡಿನಲ್ಲಿ 200ಕ್ಕೂ ಅಧಿಕ ರಾಮನ ದೇವಾಲಯಗಳಿವೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿರ್ವಹಿಸುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ, ಭಜನೆ ಅಥವಾ ಅನ್ನದಾನವನ್ನು ಮಾಡಲು ಅನುಮತಿ ನೀಡಿಲ್ಲ. ಖಾಸಗಿ ದೇವಾಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನೂ ಸಹ ಪೊಲೀಸರು ತಡೆಯುತ್ತಿದ್ದಾರೆ. ಆಯೋಜಕರಿಗೆ ನಿಮ್ಮ ಪಂಗಡಗಳನ್ನು ಕಿತ್ತುಹಾಕುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಇಂತಹ ದ್ವೇಷಪೂರಿತ ಹಿಂದೂ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ ಎಂದು ನಿರ್ಮಲಾ ಸೀತಾರಾಮನ್‌ ಬರೆದುಕೊಂಡಿದ್ದಾರೆ.

ಭಜನೆ ಆಯೋಜಿಸಿದ್ದಕ್ಕೆ, ಬಡವರಿಗೆ ಆಹಾರ ನೀಡಿದ್ದಕ್ಕೆ, ಸಿಹಿ ಹಂಚಿ ಸಂಭ್ರಮಿಸುವುದಕ್ಕೆ, ಅಯೋಧ್ಯೆಯಲ್ಲಿ ಮೋದಿ ಅವರನ್ನು ನೋಡುವುದಕ್ಕೂ ಬೆದರಿಕೆ ಹಾಕುತ್ತಿದ್ದಾರೆ. ಕೇಬಲ್‌ ಟಿವಿ ಆಪರೇಟರ್‌ಗಳು ನೇರಪ್ರಸಾರದ ಸಮಯದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಬಹುದು ಎಂದು ಹೇಳುತ್ತಿದ್ದಾರೆ. ಇದು ʼಇಂಡಿಯಾʼ ಮೈತ್ರಿಕೂಟದ ಡಿಎಂಕೆಯ ಹಿಂದೂ ವಿರೋಧಿ ಪ್ರಯತ್ನ ಎಂದೂ ಸಹ ನಿರ್ಮಲಾ ಸೀತಾರಾಮನ್‌ ಟ್ವೀಟ್‌ ಮಾಡಿದ್ದಾರೆ.

andolana

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

3 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

8 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

24 hours ago