ರಾಷ್ಟ್ರೀಯ

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ತ.ನಾಡು ಸರ್ಕಾರ ನೇರಪ್ರಸಾರ ವೀಕ್ಷಣೆ ನಿಷೇಧಿಸಿದೆ ಎಂದು ಆಕ್ರೋಶ ಹೊರಹಾಕಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ( ಜನವರಿ 21 ) ಎಕ್ಸ್‌ ಖಾತೆಯಲ್ಲಿ ತಮಿಳುನಾಡು ಸರ್ಕಾರ ಜನವರಿ 22ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಯನ್ನು ನಿಷೇಧಿಸಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ತಮಿಳು ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಸುದ್ದಿಯೊಂದರ ಫೋಟೊ ಹಂಚಿಕೊಳ್ಳುವ ಮೂಲಕ ನಿರ್ಮಲಾ ಸೀತಾರಾಮನ್‌ ಈ ರೀತಿ ಟ್ವೀಟ್‌ ಮಾಡಿದ್ದಾರೆ.

ತಮಿಳುನಾಡಿನಲ್ಲಿ 200ಕ್ಕೂ ಅಧಿಕ ರಾಮನ ದೇವಾಲಯಗಳಿವೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿರ್ವಹಿಸುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ, ಭಜನೆ ಅಥವಾ ಅನ್ನದಾನವನ್ನು ಮಾಡಲು ಅನುಮತಿ ನೀಡಿಲ್ಲ. ಖಾಸಗಿ ದೇವಾಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನೂ ಸಹ ಪೊಲೀಸರು ತಡೆಯುತ್ತಿದ್ದಾರೆ. ಆಯೋಜಕರಿಗೆ ನಿಮ್ಮ ಪಂಗಡಗಳನ್ನು ಕಿತ್ತುಹಾಕುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಇಂತಹ ದ್ವೇಷಪೂರಿತ ಹಿಂದೂ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ ಎಂದು ನಿರ್ಮಲಾ ಸೀತಾರಾಮನ್‌ ಬರೆದುಕೊಂಡಿದ್ದಾರೆ.

ಭಜನೆ ಆಯೋಜಿಸಿದ್ದಕ್ಕೆ, ಬಡವರಿಗೆ ಆಹಾರ ನೀಡಿದ್ದಕ್ಕೆ, ಸಿಹಿ ಹಂಚಿ ಸಂಭ್ರಮಿಸುವುದಕ್ಕೆ, ಅಯೋಧ್ಯೆಯಲ್ಲಿ ಮೋದಿ ಅವರನ್ನು ನೋಡುವುದಕ್ಕೂ ಬೆದರಿಕೆ ಹಾಕುತ್ತಿದ್ದಾರೆ. ಕೇಬಲ್‌ ಟಿವಿ ಆಪರೇಟರ್‌ಗಳು ನೇರಪ್ರಸಾರದ ಸಮಯದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಬಹುದು ಎಂದು ಹೇಳುತ್ತಿದ್ದಾರೆ. ಇದು ʼಇಂಡಿಯಾʼ ಮೈತ್ರಿಕೂಟದ ಡಿಎಂಕೆಯ ಹಿಂದೂ ವಿರೋಧಿ ಪ್ರಯತ್ನ ಎಂದೂ ಸಹ ನಿರ್ಮಲಾ ಸೀತಾರಾಮನ್‌ ಟ್ವೀಟ್‌ ಮಾಡಿದ್ದಾರೆ.

andolana

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

9 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

9 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

10 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

10 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago