ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ( ಜನವರಿ 21 ) ಎಕ್ಸ್ ಖಾತೆಯಲ್ಲಿ ತಮಿಳುನಾಡು ಸರ್ಕಾರ ಜನವರಿ 22ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಯನ್ನು ನಿಷೇಧಿಸಿದೆ ಎಂದು ಆರೋಪಿಸಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ತಮಿಳು ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಸುದ್ದಿಯೊಂದರ ಫೋಟೊ ಹಂಚಿಕೊಳ್ಳುವ ಮೂಲಕ ನಿರ್ಮಲಾ ಸೀತಾರಾಮನ್ ಈ ರೀತಿ ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನಲ್ಲಿ 200ಕ್ಕೂ ಅಧಿಕ ರಾಮನ ದೇವಾಲಯಗಳಿವೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿರ್ವಹಿಸುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ, ಭಜನೆ ಅಥವಾ ಅನ್ನದಾನವನ್ನು ಮಾಡಲು ಅನುಮತಿ ನೀಡಿಲ್ಲ. ಖಾಸಗಿ ದೇವಾಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನೂ ಸಹ ಪೊಲೀಸರು ತಡೆಯುತ್ತಿದ್ದಾರೆ. ಆಯೋಜಕರಿಗೆ ನಿಮ್ಮ ಪಂಗಡಗಳನ್ನು ಕಿತ್ತುಹಾಕುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಇಂತಹ ದ್ವೇಷಪೂರಿತ ಹಿಂದೂ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಬರೆದುಕೊಂಡಿದ್ದಾರೆ.
ಭಜನೆ ಆಯೋಜಿಸಿದ್ದಕ್ಕೆ, ಬಡವರಿಗೆ ಆಹಾರ ನೀಡಿದ್ದಕ್ಕೆ, ಸಿಹಿ ಹಂಚಿ ಸಂಭ್ರಮಿಸುವುದಕ್ಕೆ, ಅಯೋಧ್ಯೆಯಲ್ಲಿ ಮೋದಿ ಅವರನ್ನು ನೋಡುವುದಕ್ಕೂ ಬೆದರಿಕೆ ಹಾಕುತ್ತಿದ್ದಾರೆ. ಕೇಬಲ್ ಟಿವಿ ಆಪರೇಟರ್ಗಳು ನೇರಪ್ರಸಾರದ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು ಎಂದು ಹೇಳುತ್ತಿದ್ದಾರೆ. ಇದು ʼಇಂಡಿಯಾʼ ಮೈತ್ರಿಕೂಟದ ಡಿಎಂಕೆಯ ಹಿಂದೂ ವಿರೋಧಿ ಪ್ರಯತ್ನ ಎಂದೂ ಸಹ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…