ರಾಷ್ಟ್ರೀಯ

Fastag: ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್‌ ಮಾಡಲು ಇಂದೇ ಕೊನೆ ದಿನ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣ ಮಾಡುವವರು ತಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವುದು ಕಡ್ಡಾಯ ಎಂಬುದು ತಿಳಿದಿರುವ ವಿಷಯವೇ. ಅಂತಹ ಚಾಲಕರು ತಮ್ಮ ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್‌ ಮಾಡುವುದು ಕಡ್ಡಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇಂದು ( ಜನವರಿ 31 ) ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್‌ ಮಾಡಲು ಕೊನೆ ದಿನ ಎಂದು ಗಡುವು ನೀಡಿದ್ದು, ಕೆವೈಸಿ ಅಪ್‌ಡೇಟ್‌ ಮಾಡದಿದ್ದರೆ ಅಂತಹ ಫಾಸ್ಟ್‌ಟ್ಯಾಗ್‌ಗಳನ್ನು ಡಿಆಕ್ಟಿವೇಟ್‌ ಮಾಡಲಾಗುವುದು, ಅಲ್ಲದೇ ಫಾಸ್ಟ್‌ಟ್ಯಾಗ್‌ನಲ್ಲಿ ಸಾಕಷ್ಟು ಹಣವಿದ್ದರೂ ಸಹ ಬ್ಲಾಕ್‌ಲಿಸ್ಟ್‌ಗೆ ಹಾಕಲಾಗುವುದು ಎಂದು ಹೇಳಿದೆ.

ಇಂತಹ ನಿರ್ಧಾರದಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಒಂದೇ ವಾಹನಕ್ಕೆ ಹಲವು ಫಾಸ್ಟ್‌ಟ್ಯಾಗ್‌ ಹೊಂದಿರುವುದು, ಕೆವೈಸಿ ಪರಿಶೀಲನೆ ಮಾಡದೆಯೇ ಫಾಸ್ಟ್‌ಟ್ಯಾಗ್‌ ವಿತರಿಸಿರುವುದು ಹಾಗೂ ಉದ್ದೇಶಪೂರ್ವಕವಾಗಿ ವಾಹನದ ವಿಂಡ್‌ಸ್ಕ್ರೀನ್‌ಗಳಲ್ಲಿ ಫಾಸ್ಟ್‌ಟ್ಯಾಗ್‌ ಅಂಟಿಸದೇ ಇರದಂತಹ ತಪ್ಪುಗಳನ್ನು ತಡೆಯಲು ಮುಂದಾಗಿದೆ.

ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್‌ ಮಾಡಲು ಹೀಗೆ ಮಾಡಿ:

1. ಬ್ಯಾಂಕ್‌ ಲಿಂಕ್‌ ಇರುವ ಫಾಸ್ಟ್‌ಟ್ಯಾಗ್‌ ವೆಬ್‌ಸೈಟ್‌ಗೆ ಭೇಟಿ ನೀಡಿ
2. ನಿಮ್ಮ ರಿಜಿಸ್ಟರ್ಡ್‌ ನಂಬರ್‌ನಿಂದ ಲಾಗ್‌ಇನ್‌ ಆಗಿ ಹಾಗೂ ಒಟಿಪಿ ನಮೂದಿಸಿ
3. ಬಳಿಕ ಮೈ ಪ್ರೊಫೈಲ್‌ ವಿಭಾಗಕ್ಕೆ ತೆರಳಿ, ಕೆವೈಸಿ ಮೇಲೆ ಕ್ಲಿಕ್‌ ಮಾಡಿ
4. ಅಡ್ರೆಸ್‌ ಪ್ರೂಫ್‌ ಸೇರಿದಂತೆ ಅಗತ್ಯ ವಿವರಗಳನ್ನು ನಮೂದಿಸಿ ಹಾಗೂ ಸಬ್ಮಿಟ್‌ ಕೊಡಿ
ಇದಾದ ಬಳಿಕ ನಿಮ್ಮ ಕೆವೈಸಿ ಅಪ್‌ಡೇಟ್‌ ಪೂರ್ಣಗೊಂಡಿರುತ್ತದೆ. ಕೆವೈಸಿ ವಿಭಾಗದಲ್ಲಿ ನಿಮ್ಮ ಅಪ್‌ಡೇಟೆಡ್‌ ಸ್ಟೇಟಸ್‌ ಅನ್ನು ಗಮನಿಸಬಹುದಾಗಿದೆ

ಫಾಸ್ಟ್‌ಟ್ಯಾಗ್‌ ಸ್ಟೇಟಸ್‌ ಚೆಕ್‌ ಮಾಡೋದು ಹೇಗೆ?

fasttag.ihmcl.com ವೆಬ್‌ಸೈಟ್‌ಗೆ ಭೇಟಿ ನೀಡಿ, ಬಳಿಕ ವೆಬ್‌ಸೈಟ್‌ನ ಬಲಭಾಗದಲ್ಲಿರುವ ಲಾಗ್‌ಇನ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ. ಡ್ಯಾಷ್‌ಬೋರ್ಡ್‌ನಲ್ಲಿರುವ ಮೈ ಪ್ರೊಫೈಲ್‌ ಸೆಕ್ಷನ್‌ ಮೇಲೆ ಕ್ಲಿಕ್‌ ಮಾಡಿ, ಬಳಿಕ ಕೆವೈಸಿ ಸ್ಟೇಟಸ್‌ ಹಾಗೂ ಪ್ರೊಫೈಲ್‌ ವಿವರಗಳನ್ನು ಕಾಣಬಹುದು.

ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್‌ ಮಾಡಲು ಅಗತ್ಯವಾದ ದಾಖಲೆಗಳು:

ವಾಹನ ನೋಂದಣಿಪತ್ರ, ಗುರುತಿನ ದಾಖಲೆ, ವಿಳಾಸ ದಾಖಲೆ, ಪಾಸ್‌ಪೋರ್ಟ್‌ ಸೈಜ್‌ ಫೋಟೊ, ಪಾಸ್‌ಪೋರ್ಟ್‌, ಡ್ರೈವಿಂಗ್‌ ಲೈಸೆನ್ಸ್‌, ಆಧಾರ್‌, ವೋಟರ್‌ ಐಡಿ ಅಥವಾ ಪಾನ್‌ ಕಾರ್ಡ್‌ನಂತಹ ಐಡಿ ಪ್ರೂಫ್‌ ನೀಡಬೇಕಾಗುತ್ತದೆ.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

5 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago