ರಾಷ್ಟ್ರೀಯ

ಆಂಧ್ರಪ್ರದೇಶದ ವಿಜಯನಗರಂ ನಲ್ಲಿ ರೈಲು ಅಪಘಾತ: 8 ಸಾವು

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ನಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು 32 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು  ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ.

ಅಲರ್ಟ್ ಬಂದ ಕೂಡಲೇ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸೌರಭ್ ಪ್ರಸಾದ್, ಇತರ ರೈಲ್ವೆ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಹಾಗೂ ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆದಿದೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಿಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಾಗಿದೆ. ಘಟನಾ ಸ್ಥಳದಲ್ಲಿ ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ.

ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದ್ದು 83003; 83004; 83005; 83006, 08912746330, 8106053051, 8106053052, 8500041670, 8500041671 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

https://x.com/xpressandhra/status/1718643619115176129?s=20

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

4 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

4 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

4 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

7 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

7 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

7 hours ago