ಭೂಪಾಲ್: ಛತ್ತೀಸ್ಗಡದಲ್ಲಿ ಬಿಜೆಪಿಯ ನೂತನ ಬುಡಕಟ್ಟು ಮುಖ್ಯಮಂತ್ರಿ ವಿಷ್ಣು ದಿಯೋ ಸಾಯಿ ಅವರ ಸಂಪುಟ ಇಬ್ಬರು ಡಿಸಿಎಂಗಳನ್ನು ಹೊಂದಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಜಾತಿ ಸಮೀಕರಣವನ್ನು ಸಮತೋಲನಗೊಳಿಸುವ ಬಿಜೆಪಿ ಪಕ್ಷ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ರಾಜ್ಯ ಬಿಜೆಪಿ ಮುಖ್ಯಸ್ಥ ಹಿಂದುಳಿದ ವರ್ಗಗಳ ನಾಯಕ ಅರುಣ್ ಸಾವೊ, ಮತ್ತು ಬ್ರಾಹ್ಮಣರಾಗಿರುವ ವಿಜಯ್ ಶರ್ಮಾ ಡಿಸಿಎಂ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿಯ ಸಿಎಂ ಹುದ್ದೆಗೆ ಆಕಾಂಕ್ಷಿಯಾಗಿದ್ದ ರಜಪೂತ ಸಮುದಾಯಕ್ಕೆ ಸೇರಿದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರನ್ನು ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆ ಮಾಡುವ ಬಗ್ಗೆ ಬಿಜೆಪಿಯಲ್ಲಿ ಯೋಜನೆ ನಡೆಸಿದೆ ಎನ್ನಲಾಗಿದೆ.
ರಮಣ್ ಸಿಂಗ್ ಜೊತೆಗೆ, ಅರುಣ್ ಸಾವೊ ಕೂಡ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು. ಬಿಜೆಪಿ ಪಕ್ಷದ ಅಧಿಕಾರ ಹಂಚುವ ಹೊಸ ಸಮೀಕರಣ ಗುಂಪುಗಾರಿಕೆಯನ್ನು ದೂರವಿರಿಸಲು ಸಹಾಯ ಮಾಡುತ್ತದೆ ಎಂಬ ಯೋಜನೆಯಿಂದ ಈ ತೀರ್ಮಾನಕ್ಕೆ ಬರಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…