ರಾಷ್ಟ್ರೀಯ

ಶವ ಸಂಸ್ಕಾರಕದ ವೇಳೆ ಸಿಡಿಲು ಬಡಿದು ಇಬ್ಬರ ದುರ್ಮರಣ

ಚೆನ್ನೈ : ಮಳೆ ಬರುತ್ತಿದೆಂದು ಮರದ ಕೆಳಗೆ ನಿಂತಿದ್ದ ಜನರ ಗುಂಪಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ತಮಿಳುನಾಡಿನ ಮದುರೈ ಜಿಲ್ಲೆಯ ಕೀರಾನೂರು ಗ್ರಾಮದಲ್ಲಿ ನಡೆದಿದೆ.

ಕೀರಾನೂರು ಗ್ರಾಮ ಅಗ್ನಿರಾಜ (25), ಸೆಲ್ವಾ (23) ಮೃತ ಯುವಕರು. ಗ್ರಾಮದಲ್ಲಿ ಸಂಬಂಧಿಯೊಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಬಂದಿದ್ದ ಜನರು ಶವ ಸಂಸ್ಕಾರ ಮಾಡಲೆಂದು ತೆರಳುತ್ತಿದ್ದರು. ಈ ವೇಳೆ ಜೋರಾಗಿ ಮಳೆ ಬಂದಿದ್ದರಿಂದ ಹಲವರು ಹೋಗಿ ಮರದ ಕೆಳಗೆ ಆಶ್ರಯ ಪಡೆದುಕೊಂಡಿದ್ದರು.

ಇದೇ ಸಮಯದಲ್ಲಿ ಮರಕ್ಕೆ ಸಿಡಿಲು ಬಡಿದಿದ್ದರಿಂದ ಅದರ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 6 ಗಾಯಾಳುಗಳನ್ನು ಮಧುರೈನ ಸರ್ಕಾರಿ ಆಸ್ಪತ್ರೆಗೆ, ಉಳಿದವರನ್ನು ಶಿವಗಂಗೈ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

lokesh

Recent Posts

ಪ್ರೇಮಿಗಳ ದಿನಾಚರಣೆಗೆ : ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…

20 mins ago

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…

30 mins ago

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

1 hour ago

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

2 hours ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

2 hours ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

3 hours ago