ರಾಷ್ಟ್ರೀಯ

ಶವ ಸಂಸ್ಕಾರಕದ ವೇಳೆ ಸಿಡಿಲು ಬಡಿದು ಇಬ್ಬರ ದುರ್ಮರಣ

ಚೆನ್ನೈ : ಮಳೆ ಬರುತ್ತಿದೆಂದು ಮರದ ಕೆಳಗೆ ನಿಂತಿದ್ದ ಜನರ ಗುಂಪಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ತಮಿಳುನಾಡಿನ ಮದುರೈ ಜಿಲ್ಲೆಯ ಕೀರಾನೂರು ಗ್ರಾಮದಲ್ಲಿ ನಡೆದಿದೆ.

ಕೀರಾನೂರು ಗ್ರಾಮ ಅಗ್ನಿರಾಜ (25), ಸೆಲ್ವಾ (23) ಮೃತ ಯುವಕರು. ಗ್ರಾಮದಲ್ಲಿ ಸಂಬಂಧಿಯೊಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಬಂದಿದ್ದ ಜನರು ಶವ ಸಂಸ್ಕಾರ ಮಾಡಲೆಂದು ತೆರಳುತ್ತಿದ್ದರು. ಈ ವೇಳೆ ಜೋರಾಗಿ ಮಳೆ ಬಂದಿದ್ದರಿಂದ ಹಲವರು ಹೋಗಿ ಮರದ ಕೆಳಗೆ ಆಶ್ರಯ ಪಡೆದುಕೊಂಡಿದ್ದರು.

ಇದೇ ಸಮಯದಲ್ಲಿ ಮರಕ್ಕೆ ಸಿಡಿಲು ಬಡಿದಿದ್ದರಿಂದ ಅದರ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 6 ಗಾಯಾಳುಗಳನ್ನು ಮಧುರೈನ ಸರ್ಕಾರಿ ಆಸ್ಪತ್ರೆಗೆ, ಉಳಿದವರನ್ನು ಶಿವಗಂಗೈ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

lokesh

Recent Posts

ಯೋಗೇಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್…

16 mins ago

ಮೈಸೂರು | ಮನೆಯ ಮಂಚದ ಕೆಳಗೆ ಚಿರತೆ ಪ್ರಕ್ಷತ್ಯ, ಆತಂಕಕ್ಕೀಡಾದ ಮನೆಮಂದಿ

ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…

39 mins ago

ಚಾರಣಿಗರ ಮೊಬೈಲ್ ಗೆ ಟ್ರ್ಯಾಕಿಂಗ್ ಆಪ್ ಅಳವಡಿಕೆ ಕಡ್ಡಾಯ: ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…

1 hour ago

ಅಮೆರಿಕ-ಇರಾನ್ ಎರಡನೇ ಸುತ್ತಿನ ಮಾತುಕತೆಗೆ ಪಾಕಿಸ್ತಾನ ಸಿದ್ಧತೆ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…

2 hours ago

ಕಾರು-ಖಾಸಗಿ ಬಸ್‌ ಡಿಕ್ಕಿ : 6 ಮಂದಿ ಸಜೀವ ದಹನ

ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…

3 hours ago

ಕುಡಿಯಲು ಶುದ್ಧ ನೀರಿಲ್ಲದೆ ಆಲಗೂಡು ಗ್ರಾಮಸ್ಥರ ಪರದಾಟ

ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…

4 hours ago