ರಾಷ್ಟ್ರೀಯ

ಶವ ಸಂಸ್ಕಾರಕದ ವೇಳೆ ಸಿಡಿಲು ಬಡಿದು ಇಬ್ಬರ ದುರ್ಮರಣ

ಚೆನ್ನೈ : ಮಳೆ ಬರುತ್ತಿದೆಂದು ಮರದ ಕೆಳಗೆ ನಿಂತಿದ್ದ ಜನರ ಗುಂಪಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ತಮಿಳುನಾಡಿನ ಮದುರೈ ಜಿಲ್ಲೆಯ ಕೀರಾನೂರು ಗ್ರಾಮದಲ್ಲಿ ನಡೆದಿದೆ.

ಕೀರಾನೂರು ಗ್ರಾಮ ಅಗ್ನಿರಾಜ (25), ಸೆಲ್ವಾ (23) ಮೃತ ಯುವಕರು. ಗ್ರಾಮದಲ್ಲಿ ಸಂಬಂಧಿಯೊಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಬಂದಿದ್ದ ಜನರು ಶವ ಸಂಸ್ಕಾರ ಮಾಡಲೆಂದು ತೆರಳುತ್ತಿದ್ದರು. ಈ ವೇಳೆ ಜೋರಾಗಿ ಮಳೆ ಬಂದಿದ್ದರಿಂದ ಹಲವರು ಹೋಗಿ ಮರದ ಕೆಳಗೆ ಆಶ್ರಯ ಪಡೆದುಕೊಂಡಿದ್ದರು.

ಇದೇ ಸಮಯದಲ್ಲಿ ಮರಕ್ಕೆ ಸಿಡಿಲು ಬಡಿದಿದ್ದರಿಂದ ಅದರ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 6 ಗಾಯಾಳುಗಳನ್ನು ಮಧುರೈನ ಸರ್ಕಾರಿ ಆಸ್ಪತ್ರೆಗೆ, ಉಳಿದವರನ್ನು ಶಿವಗಂಗೈ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

44 mins ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

11 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

15 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

16 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

16 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

20 hours ago