ಚೆನ್ನೈ : ಮಳೆ ಬರುತ್ತಿದೆಂದು ಮರದ ಕೆಳಗೆ ನಿಂತಿದ್ದ ಜನರ ಗುಂಪಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ತಮಿಳುನಾಡಿನ ಮದುರೈ ಜಿಲ್ಲೆಯ ಕೀರಾನೂರು ಗ್ರಾಮದಲ್ಲಿ ನಡೆದಿದೆ.
ಕೀರಾನೂರು ಗ್ರಾಮ ಅಗ್ನಿರಾಜ (25), ಸೆಲ್ವಾ (23) ಮೃತ ಯುವಕರು. ಗ್ರಾಮದಲ್ಲಿ ಸಂಬಂಧಿಯೊಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಬಂದಿದ್ದ ಜನರು ಶವ ಸಂಸ್ಕಾರ ಮಾಡಲೆಂದು ತೆರಳುತ್ತಿದ್ದರು. ಈ ವೇಳೆ ಜೋರಾಗಿ ಮಳೆ ಬಂದಿದ್ದರಿಂದ ಹಲವರು ಹೋಗಿ ಮರದ ಕೆಳಗೆ ಆಶ್ರಯ ಪಡೆದುಕೊಂಡಿದ್ದರು.
ಇದೇ ಸಮಯದಲ್ಲಿ ಮರಕ್ಕೆ ಸಿಡಿಲು ಬಡಿದಿದ್ದರಿಂದ ಅದರ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 6 ಗಾಯಾಳುಗಳನ್ನು ಮಧುರೈನ ಸರ್ಕಾರಿ ಆಸ್ಪತ್ರೆಗೆ, ಉಳಿದವರನ್ನು ಶಿವಗಂಗೈ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…