ರಾಷ್ಟ್ರೀಯ

‌ಯುಎಪಿಎ ಹೇರಿಕೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಉಮರ್‌ ಖಾಲಿದ್‌

ನವದೆಹಲಿ : ತಮ್ಮ ವಿರುದ್ಧ ಹೇರಲಾಗಿರುವ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆಯ ನಿಬಂಧನೆಗಳನ್ನು ಪ್ರಶ್ನಿಸಿ ಹೋರಾಟಗಾರ ಉಮರ್‌ ಖಾಲಿದ್‌ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಜಧಾನಿಯಲ್ಲಿ 2020 ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಖಾಲಿದ್‌ ಅವರು ಯುಎಪಿಎ ಅಡಿ ಸೆಪ್ಟೆಂಬರ್‌ 2020ರಿಂದ ಬಂಧನದಲ್ಲಿದ್ದಾರೆ.

ಶುಕ್ರವಾರ ಸುಪ್ರೀಂ ಕೋರ್ಟಿನ ವಿಭಾಗೀಯ ಪೀಠವೊಂದು ಖಾಲಿದ್‌ ಅವರ ಅರ್ಜಿಯನ್ನು ಯುಎಪಿಎ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಇತರ ಅರ್ಜಿಗಳೊಂದಿಗೆ ಸೇರಿಸಿದೆ.

ತಾನು ದೆಹಲಿ ಹಿಂಸಾಚಾರದಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಹಾಗೂ ಯಾವುದೇ ಸಂಚನ್ನು ಇತರ ಆರೋಪಿಗಳೊಂದಿಗೆ ಹೂಡಿಲ್ಲ ಎಂದು ಹೇಳಿ ಖಾಲಿದ್‌ ಅವರು ಜಾಮೀನನ್ನೂ ಕೋರಿದ್ದಾರೆ.

ಜೆಎನ್‌ಯುವಿನ ಮಾಜಿ ವಿದ್ಯಾರ್ಥಿಯಾಗಿರುವ ಉಮರ್‌ ಖಾಲಿದ್‌ ಅವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನಿರಾಕರಿಸಿದ ನಂತರ ಅವರು ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದಾರೆ.

ಖಾಲಿದ್‌ ಅವರ ಪ್ರಕರಣ ಸುಪ್ರೀಂ ಕೋರ್ಟ್‌ ಮುಂದೆ ಮೇ18ರಂದು ಮೊದಲು ಬಂದಿತ್ತು. ಅಂದಿನಿಂದ ವಿವಿಧ ಕಾರಣಗಳಿಗಾಗಿ ಆರು ಬಾರಿ ಮುಂದೂಡಲ್ಪಟ್ಟಿದೆ.

andolanait

Recent Posts

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

6 seconds ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

29 mins ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

2 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

2 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

2 hours ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

3 hours ago