ರಾಷ್ಟ್ರೀಯ

‌ಯುಎಪಿಎ ಹೇರಿಕೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಉಮರ್‌ ಖಾಲಿದ್‌

ನವದೆಹಲಿ : ತಮ್ಮ ವಿರುದ್ಧ ಹೇರಲಾಗಿರುವ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆಯ ನಿಬಂಧನೆಗಳನ್ನು ಪ್ರಶ್ನಿಸಿ ಹೋರಾಟಗಾರ ಉಮರ್‌ ಖಾಲಿದ್‌ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಜಧಾನಿಯಲ್ಲಿ 2020 ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಖಾಲಿದ್‌ ಅವರು ಯುಎಪಿಎ ಅಡಿ ಸೆಪ್ಟೆಂಬರ್‌ 2020ರಿಂದ ಬಂಧನದಲ್ಲಿದ್ದಾರೆ.

ಶುಕ್ರವಾರ ಸುಪ್ರೀಂ ಕೋರ್ಟಿನ ವಿಭಾಗೀಯ ಪೀಠವೊಂದು ಖಾಲಿದ್‌ ಅವರ ಅರ್ಜಿಯನ್ನು ಯುಎಪಿಎ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಇತರ ಅರ್ಜಿಗಳೊಂದಿಗೆ ಸೇರಿಸಿದೆ.

ತಾನು ದೆಹಲಿ ಹಿಂಸಾಚಾರದಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಹಾಗೂ ಯಾವುದೇ ಸಂಚನ್ನು ಇತರ ಆರೋಪಿಗಳೊಂದಿಗೆ ಹೂಡಿಲ್ಲ ಎಂದು ಹೇಳಿ ಖಾಲಿದ್‌ ಅವರು ಜಾಮೀನನ್ನೂ ಕೋರಿದ್ದಾರೆ.

ಜೆಎನ್‌ಯುವಿನ ಮಾಜಿ ವಿದ್ಯಾರ್ಥಿಯಾಗಿರುವ ಉಮರ್‌ ಖಾಲಿದ್‌ ಅವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನಿರಾಕರಿಸಿದ ನಂತರ ಅವರು ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದಾರೆ.

ಖಾಲಿದ್‌ ಅವರ ಪ್ರಕರಣ ಸುಪ್ರೀಂ ಕೋರ್ಟ್‌ ಮುಂದೆ ಮೇ18ರಂದು ಮೊದಲು ಬಂದಿತ್ತು. ಅಂದಿನಿಂದ ವಿವಿಧ ಕಾರಣಗಳಿಗಾಗಿ ಆರು ಬಾರಿ ಮುಂದೂಡಲ್ಪಟ್ಟಿದೆ.

andolanait

Recent Posts

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

2 hours ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

2 hours ago

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

2 hours ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

2 hours ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

13 hours ago