ರಾಷ್ಟ್ರೀಯ

‌ಯುಎಪಿಎ ಹೇರಿಕೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಉಮರ್‌ ಖಾಲಿದ್‌

ನವದೆಹಲಿ : ತಮ್ಮ ವಿರುದ್ಧ ಹೇರಲಾಗಿರುವ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆಯ ನಿಬಂಧನೆಗಳನ್ನು ಪ್ರಶ್ನಿಸಿ ಹೋರಾಟಗಾರ ಉಮರ್‌ ಖಾಲಿದ್‌ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಜಧಾನಿಯಲ್ಲಿ 2020 ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಖಾಲಿದ್‌ ಅವರು ಯುಎಪಿಎ ಅಡಿ ಸೆಪ್ಟೆಂಬರ್‌ 2020ರಿಂದ ಬಂಧನದಲ್ಲಿದ್ದಾರೆ.

ಶುಕ್ರವಾರ ಸುಪ್ರೀಂ ಕೋರ್ಟಿನ ವಿಭಾಗೀಯ ಪೀಠವೊಂದು ಖಾಲಿದ್‌ ಅವರ ಅರ್ಜಿಯನ್ನು ಯುಎಪಿಎ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಇತರ ಅರ್ಜಿಗಳೊಂದಿಗೆ ಸೇರಿಸಿದೆ.

ತಾನು ದೆಹಲಿ ಹಿಂಸಾಚಾರದಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಹಾಗೂ ಯಾವುದೇ ಸಂಚನ್ನು ಇತರ ಆರೋಪಿಗಳೊಂದಿಗೆ ಹೂಡಿಲ್ಲ ಎಂದು ಹೇಳಿ ಖಾಲಿದ್‌ ಅವರು ಜಾಮೀನನ್ನೂ ಕೋರಿದ್ದಾರೆ.

ಜೆಎನ್‌ಯುವಿನ ಮಾಜಿ ವಿದ್ಯಾರ್ಥಿಯಾಗಿರುವ ಉಮರ್‌ ಖಾಲಿದ್‌ ಅವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನಿರಾಕರಿಸಿದ ನಂತರ ಅವರು ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದಾರೆ.

ಖಾಲಿದ್‌ ಅವರ ಪ್ರಕರಣ ಸುಪ್ರೀಂ ಕೋರ್ಟ್‌ ಮುಂದೆ ಮೇ18ರಂದು ಮೊದಲು ಬಂದಿತ್ತು. ಅಂದಿನಿಂದ ವಿವಿಧ ಕಾರಣಗಳಿಗಾಗಿ ಆರು ಬಾರಿ ಮುಂದೂಡಲ್ಪಟ್ಟಿದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

3 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

3 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

3 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

3 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

3 hours ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

3 hours ago