ರಾಷ್ಟ್ರೀಯ

‌ಯುಎಪಿಎ ಹೇರಿಕೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಉಮರ್‌ ಖಾಲಿದ್‌

ನವದೆಹಲಿ : ತಮ್ಮ ವಿರುದ್ಧ ಹೇರಲಾಗಿರುವ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆಯ ನಿಬಂಧನೆಗಳನ್ನು ಪ್ರಶ್ನಿಸಿ ಹೋರಾಟಗಾರ ಉಮರ್‌ ಖಾಲಿದ್‌ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಜಧಾನಿಯಲ್ಲಿ 2020 ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಖಾಲಿದ್‌ ಅವರು ಯುಎಪಿಎ ಅಡಿ ಸೆಪ್ಟೆಂಬರ್‌ 2020ರಿಂದ ಬಂಧನದಲ್ಲಿದ್ದಾರೆ.

ಶುಕ್ರವಾರ ಸುಪ್ರೀಂ ಕೋರ್ಟಿನ ವಿಭಾಗೀಯ ಪೀಠವೊಂದು ಖಾಲಿದ್‌ ಅವರ ಅರ್ಜಿಯನ್ನು ಯುಎಪಿಎ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಇತರ ಅರ್ಜಿಗಳೊಂದಿಗೆ ಸೇರಿಸಿದೆ.

ತಾನು ದೆಹಲಿ ಹಿಂಸಾಚಾರದಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಹಾಗೂ ಯಾವುದೇ ಸಂಚನ್ನು ಇತರ ಆರೋಪಿಗಳೊಂದಿಗೆ ಹೂಡಿಲ್ಲ ಎಂದು ಹೇಳಿ ಖಾಲಿದ್‌ ಅವರು ಜಾಮೀನನ್ನೂ ಕೋರಿದ್ದಾರೆ.

ಜೆಎನ್‌ಯುವಿನ ಮಾಜಿ ವಿದ್ಯಾರ್ಥಿಯಾಗಿರುವ ಉಮರ್‌ ಖಾಲಿದ್‌ ಅವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನಿರಾಕರಿಸಿದ ನಂತರ ಅವರು ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದಾರೆ.

ಖಾಲಿದ್‌ ಅವರ ಪ್ರಕರಣ ಸುಪ್ರೀಂ ಕೋರ್ಟ್‌ ಮುಂದೆ ಮೇ18ರಂದು ಮೊದಲು ಬಂದಿತ್ತು. ಅಂದಿನಿಂದ ವಿವಿಧ ಕಾರಣಗಳಿಗಾಗಿ ಆರು ಬಾರಿ ಮುಂದೂಡಲ್ಪಟ್ಟಿದೆ.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

6 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

15 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago