ನವದೆಹಲಿ : ತಮ್ಮ ವಿರುದ್ಧ ಹೇರಲಾಗಿರುವ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆಯ ನಿಬಂಧನೆಗಳನ್ನು ಪ್ರಶ್ನಿಸಿ ಹೋರಾಟಗಾರ ಉಮರ್ ಖಾಲಿದ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜಧಾನಿಯಲ್ಲಿ 2020 ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಖಾಲಿದ್ ಅವರು ಯುಎಪಿಎ ಅಡಿ ಸೆಪ್ಟೆಂಬರ್ 2020ರಿಂದ ಬಂಧನದಲ್ಲಿದ್ದಾರೆ.
ಶುಕ್ರವಾರ ಸುಪ್ರೀಂ ಕೋರ್ಟಿನ ವಿಭಾಗೀಯ ಪೀಠವೊಂದು ಖಾಲಿದ್ ಅವರ ಅರ್ಜಿಯನ್ನು ಯುಎಪಿಎ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಇತರ ಅರ್ಜಿಗಳೊಂದಿಗೆ ಸೇರಿಸಿದೆ.
ತಾನು ದೆಹಲಿ ಹಿಂಸಾಚಾರದಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಹಾಗೂ ಯಾವುದೇ ಸಂಚನ್ನು ಇತರ ಆರೋಪಿಗಳೊಂದಿಗೆ ಹೂಡಿಲ್ಲ ಎಂದು ಹೇಳಿ ಖಾಲಿದ್ ಅವರು ಜಾಮೀನನ್ನೂ ಕೋರಿದ್ದಾರೆ.
ಜೆಎನ್ಯುವಿನ ಮಾಜಿ ವಿದ್ಯಾರ್ಥಿಯಾಗಿರುವ ಉಮರ್ ಖಾಲಿದ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ನಂತರ ಅವರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.
ಖಾಲಿದ್ ಅವರ ಪ್ರಕರಣ ಸುಪ್ರೀಂ ಕೋರ್ಟ್ ಮುಂದೆ ಮೇ18ರಂದು ಮೊದಲು ಬಂದಿತ್ತು. ಅಂದಿನಿಂದ ವಿವಿಧ ಕಾರಣಗಳಿಗಾಗಿ ಆರು ಬಾರಿ ಮುಂದೂಡಲ್ಪಟ್ಟಿದೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…