ರಾಷ್ಟ್ರೀಯ

Union Budget-2024: ಸರ್ಕಾರದ ಆದಾಯ ಮತ್ತು ಖರ್ಚು ಹೇಗೆ? ಇಲ್ಲಿದೆ ನೋಡಿ

ನವದೆಹಲಿ : ಈ ಬಾರಿಯ ಮಧ್ಯಂತರ ಬಜೆಟ್​ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ಘೋಷಣೆಗಳನ್ನು ಮಾಡಿಲ್ಲ. ಹಿಂದಿನ ವರ್ಷಗಳಲ್ಲಿ ಆಗಿರುವ ಸಾಧನೆ, ಮುಂದಿನ ದಶಕಗಳಲ್ಲಿ ಸರ್ಕಾರ ಇಟ್ಟಿರುವ ಅಭಿವೃದ್ಧಿ ಗುರಿ, ಈ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ದೂರದೃಷ್ಟಿಯ ಯೋಜನೆ ಇತ್ಯಾದಿ ಕಡೆ ಬಜೆಟ್ ಗಮನ ಕೊಟ್ಟಿದೆ.

ಬಜೆಟ್‌ ಮಂಡನೆ ಮತ್ತು ಅದರ ಆದಾಯ ಮತ್ತು ಖರ್ಚು ಹೇಗೆ? ಸರ್ಕಾರದ ಹಣ ಯಾವ್ಯಾವುದಕ್ಕೆ ವ್ಯಯವಾಗುತ್ತದೆ, ಸರ್ಕಾರಕ್ಕೆ ಬರುವ ಆದಾಯ ಎಷ್ಟು, ಅದು ಎಲ್ಲಿಗೆ ಹರಿದುಹೋಗುತ್ತದೆ ಎಂಬಿತ್ಯಾದಿ ವಿವರಗಳು ಇಲ್ಲಿದೆ.

ಸರ್ಕಾರಕ್ಕೆ ಹಣದ ಹರಿವು ಎಲ್ಲೆಲ್ಲಿಂದ?
ಸಾಲಗಳಿಂದ: ಶೇ. 28
ಆದಾಯ ತೆರಿಗೆ: ಶೇ. 19
ಕೇಂದ್ರ ಅಬಕಾರಿ ಸುಂಕ: ಶೇ. 5
ಕಾರ್ಪೊರೇಶನ್ ತೆರಿಗೆ: ಶೇ. 17
ಜಿಎಸ್​ಟಿ ಮತ್ತಿತರ ತೆರಿಗೆ: ಶೇ. 18
ತೆರಿಗೆಯೇತರ ಸ್ವೀಕೃತಿ: ಶೇ. 7
ಸಾಲವಲ್ಲದ ಬಂಡವಾಳ ಸ್ವೀಕೃತಿ: ಶೇ. 1
ಆಮದು ಸುಂಕ ಅಥವಾ ಕಸ್ಟಮ್ಸ್: ಶೇ. 4

ಸರ್ಕಾರದಿಂದ ಹಣದ ವೆಚ್ಚ ಎಲ್ಲಿಗೆ?
ಬಡ್ಡಿ ಪಾವತಿ: ಶೇ. 20
ಕೇಂದ್ರದ ಪ್ರಾಯೋಜಿತ ಯೋಜನೆಗಳು: ಶೇ. 8
ಪಿಂಚಣಿ: ಶೇ. 4
ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆ: ಶೇ. 20
ಹಣಕಾಸು ಆಯೋಗ ಮತ್ತಿತರ ವರ್ಗಾವಣೆ: ಶೇ. 8
ಕೇಂದ್ರ ವಲಯ ಸ್ಕೀಮ್​ಗಳು: ಶೇ. 16
ಸಬ್ಸಿಡಿ: ಶೇ. 6
ರಕ್ಷಣಾ ವಲಯ: ಶೇ. 8

ಯಾವ್ಯಾವ ಇಲಾಖೆಗೆ ಎಷ್ಟು ಹಣ ನಿಯೋಜನೆ
ರಕ್ಷಣಾ ಸಚಿವಾಲಯ: 6.2 ಲಕ್ಷ ಕೋಟಿ ರೂ
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ: 2.78 ಲಕ್ಷ ಕೋಟಿ ರೂ
ರೈಲ್ವೆ ಸಚಿವಾಲಯ: 2.55 ಲಕ್ಷ ಕೋಟಿ ರೂ
ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ: 2.13 ಲಕ್ಷ ಕೋಟಿ ರೂ
ಗೃಹ ವ್ಯವಹಾರಗಳ ಸಚಿವಾಲಯ: 2.03 ಲಕ್ಷ ಕೋಟಿ ರೂ
ಗ್ರಾಮೀಣಾಭಿವೃದ್ಧಿ ಸಚಿವಾಲಯ: 1.77 ಲಕ್ಷ ಕೋಟಿ ರೂ
ರಾಸಾಯನಿಕ ಮತ್ತು ರಸಗೊಬ್ಬರ: 1.68 ಲಕ್ಷ ಕೋಟಿ ರೂ
ಸಂವಹನ ಸಚಿವಾಲಯ: 1.37 ಲಕ್ಷ ಕೋಟಿ ರೂ
ಕೃಷಿ ಮತ್ತು ರೈತರ ಕಲ್ಯಾಣ: 1.27 ಲಕ್ಷ ಕೋಟಿ ರೂ

ಪ್ರಮುಖ ಯೋಜನೆಗಳಿಗೆ ಸಿಕ್ಕ ಹಣ
ಮನ್​ರೇಗಾ ಯೋಜನೆ: 60,000 ರಿಂದ 86,000 ಕೋಟಿ ರೂಗೆ ಏರಿಕೆ
ಆಯುಷ್ಮಾನ್ ಭಾರತ್: 7,200 ರಿಂದ 7,500 ಕೋಟಿ ರೂಗೆ ಏರಿಕೆ
ಪಿಎಲ್​ಐ ಸ್ಕೀಮ್: 4,645ರಿಂದ 6,200 ಕೋಟಿ ರೂಗೆ ಏರಿಕೆ
ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಯೋಜನೆ: 3,000ದಿಂದ 6,903 ಕೋಟಿ ರೂಗೆ ಏರಿಕೆ
ಸೌರ ವಿದ್ಯುತ್: 4,970ರಿಂದ 8,500 ಕೋಟಿ ರೂಗೆ ಏರಿಕೆ
ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್: 297ರಿಂದ 600 ಕೋಟಿ ರೂಗೆ ಏರಿಕೆ

andolanait

Recent Posts

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

3 mins ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

53 mins ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

1 hour ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

2 hours ago

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

2 hours ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

3 hours ago