ನವದೆಹಲಿ : ಈ ಬಾರಿಯ ಮಧ್ಯಂತರ ಬಜೆಟ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ಘೋಷಣೆಗಳನ್ನು ಮಾಡಿಲ್ಲ. ಹಿಂದಿನ ವರ್ಷಗಳಲ್ಲಿ ಆಗಿರುವ ಸಾಧನೆ, ಮುಂದಿನ ದಶಕಗಳಲ್ಲಿ ಸರ್ಕಾರ ಇಟ್ಟಿರುವ ಅಭಿವೃದ್ಧಿ ಗುರಿ, ಈ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ದೂರದೃಷ್ಟಿಯ ಯೋಜನೆ ಇತ್ಯಾದಿ ಕಡೆ ಬಜೆಟ್ ಗಮನ ಕೊಟ್ಟಿದೆ.
ಬಜೆಟ್ ಮಂಡನೆ ಮತ್ತು ಅದರ ಆದಾಯ ಮತ್ತು ಖರ್ಚು ಹೇಗೆ? ಸರ್ಕಾರದ ಹಣ ಯಾವ್ಯಾವುದಕ್ಕೆ ವ್ಯಯವಾಗುತ್ತದೆ, ಸರ್ಕಾರಕ್ಕೆ ಬರುವ ಆದಾಯ ಎಷ್ಟು, ಅದು ಎಲ್ಲಿಗೆ ಹರಿದುಹೋಗುತ್ತದೆ ಎಂಬಿತ್ಯಾದಿ ವಿವರಗಳು ಇಲ್ಲಿದೆ.
ಸರ್ಕಾರಕ್ಕೆ ಹಣದ ಹರಿವು ಎಲ್ಲೆಲ್ಲಿಂದ?
ಸಾಲಗಳಿಂದ: ಶೇ. 28
ಆದಾಯ ತೆರಿಗೆ: ಶೇ. 19
ಕೇಂದ್ರ ಅಬಕಾರಿ ಸುಂಕ: ಶೇ. 5
ಕಾರ್ಪೊರೇಶನ್ ತೆರಿಗೆ: ಶೇ. 17
ಜಿಎಸ್ಟಿ ಮತ್ತಿತರ ತೆರಿಗೆ: ಶೇ. 18
ತೆರಿಗೆಯೇತರ ಸ್ವೀಕೃತಿ: ಶೇ. 7
ಸಾಲವಲ್ಲದ ಬಂಡವಾಳ ಸ್ವೀಕೃತಿ: ಶೇ. 1
ಆಮದು ಸುಂಕ ಅಥವಾ ಕಸ್ಟಮ್ಸ್: ಶೇ. 4
ಸರ್ಕಾರದಿಂದ ಹಣದ ವೆಚ್ಚ ಎಲ್ಲಿಗೆ?
ಬಡ್ಡಿ ಪಾವತಿ: ಶೇ. 20
ಕೇಂದ್ರದ ಪ್ರಾಯೋಜಿತ ಯೋಜನೆಗಳು: ಶೇ. 8
ಪಿಂಚಣಿ: ಶೇ. 4
ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆ: ಶೇ. 20
ಹಣಕಾಸು ಆಯೋಗ ಮತ್ತಿತರ ವರ್ಗಾವಣೆ: ಶೇ. 8
ಕೇಂದ್ರ ವಲಯ ಸ್ಕೀಮ್ಗಳು: ಶೇ. 16
ಸಬ್ಸಿಡಿ: ಶೇ. 6
ರಕ್ಷಣಾ ವಲಯ: ಶೇ. 8
ಯಾವ್ಯಾವ ಇಲಾಖೆಗೆ ಎಷ್ಟು ಹಣ ನಿಯೋಜನೆ
ರಕ್ಷಣಾ ಸಚಿವಾಲಯ: 6.2 ಲಕ್ಷ ಕೋಟಿ ರೂ
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ: 2.78 ಲಕ್ಷ ಕೋಟಿ ರೂ
ರೈಲ್ವೆ ಸಚಿವಾಲಯ: 2.55 ಲಕ್ಷ ಕೋಟಿ ರೂ
ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ: 2.13 ಲಕ್ಷ ಕೋಟಿ ರೂ
ಗೃಹ ವ್ಯವಹಾರಗಳ ಸಚಿವಾಲಯ: 2.03 ಲಕ್ಷ ಕೋಟಿ ರೂ
ಗ್ರಾಮೀಣಾಭಿವೃದ್ಧಿ ಸಚಿವಾಲಯ: 1.77 ಲಕ್ಷ ಕೋಟಿ ರೂ
ರಾಸಾಯನಿಕ ಮತ್ತು ರಸಗೊಬ್ಬರ: 1.68 ಲಕ್ಷ ಕೋಟಿ ರೂ
ಸಂವಹನ ಸಚಿವಾಲಯ: 1.37 ಲಕ್ಷ ಕೋಟಿ ರೂ
ಕೃಷಿ ಮತ್ತು ರೈತರ ಕಲ್ಯಾಣ: 1.27 ಲಕ್ಷ ಕೋಟಿ ರೂ
ಪ್ರಮುಖ ಯೋಜನೆಗಳಿಗೆ ಸಿಕ್ಕ ಹಣ
ಮನ್ರೇಗಾ ಯೋಜನೆ: 60,000 ರಿಂದ 86,000 ಕೋಟಿ ರೂಗೆ ಏರಿಕೆ
ಆಯುಷ್ಮಾನ್ ಭಾರತ್: 7,200 ರಿಂದ 7,500 ಕೋಟಿ ರೂಗೆ ಏರಿಕೆ
ಪಿಎಲ್ಐ ಸ್ಕೀಮ್: 4,645ರಿಂದ 6,200 ಕೋಟಿ ರೂಗೆ ಏರಿಕೆ
ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಯೋಜನೆ: 3,000ದಿಂದ 6,903 ಕೋಟಿ ರೂಗೆ ಏರಿಕೆ
ಸೌರ ವಿದ್ಯುತ್: 4,970ರಿಂದ 8,500 ಕೋಟಿ ರೂಗೆ ಏರಿಕೆ
ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್: 297ರಿಂದ 600 ಕೋಟಿ ರೂಗೆ ಏರಿಕೆ
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…