ರಾಷ್ಟ್ರೀಯ

Union Budget 2024: ಬಜೆಟ್‌ ಮಂಡನೆಯಲ್ಲಿ ಮೊರಾರ್ಜಿ ದೇಸಾಯಿ ದಾಖಲೆ ಸರಿಗಟ್ಟಿದ ನಿರ್ಮಲಾ ಸೀತಾರಾಮನ್‌

ಇಂದು ( ಫೆಬ್ರವರಿ 1 ) ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಮಂಡನೆ ನಡೆಯುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್ ಮಂಡಿಸುತ್ತಿದ್ದು ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಮೊರಾರ್ಜಿ ದೇಸಾಯಿ ಬಳಿಕ ಸತತ ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆಯನ್ನು ನಿರ್ಮಲಾ ಸೀತಾರಾಮನ್‌ ಮಾಡಿದ್ದಾರೆ. 2019ರಿಂದ 2023ರವರೆಗೆ ಸತತವಾಗಿ ಐದು ಬಾರಿ ವಾರ್ಷಿಕ ಬಜೆಟ್‌ ಮಂಡನೆ ಮಾಡಿದ್ದ ನಿರ್ಮಲಾ ಸೀತಾರಾಮನ್‌ ಇಂದು ನಡೆಯುತ್ತಿರುವ ಮಧ್ಯಂತರ ಬಜೆಟ್‌ ಸೇರಿ ಸತತ ಆರನೇ ಬಾರಿಗೆ ಬಜೆಟ್‌ ಮಂಡಿಸಿದ್ದಾರೆ.

ಈ ಹಿಂದೆ ಹಣಕಾಸು ಸಚಿವರಾಗಿದ್ದ ಮೊರಾರ್ಜಿ ದೇಸಾಯಿ 1959ರಿಂದ 1964ರವರೆಗೆ ಐದು ವಾರ್ಷಿಕ ಬಜೆಟ್‌ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿ ಸತತವಾಗಿ ಅತಿಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಫೈನಾನ್ಸ್‌ ಮಿನಿಸ್ಟರ್‌ ಎಂಬ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಸರಿದೂಗಿಸಿರುವ ನಿರ್ಮಲಾ ಸೀತಾರಾಮನ್‌ ಐದು ಬಾರಿ ಬಜೆಟ್‌ ಮಂಡಿಸಿದ್ದ ಮನಮೋಹನ್‌ ಸಿಂಗ್‌, ಅರುಣ್‌ ಜೇಟ್ಲಿ, ಪಿ ಚಿದಂಬರಂ ಹಾಗೂ ಯಶವಂತ್‌ ಸಿನ್ಹಾ ಅವರನ್ನು ಹಿಂದಿಕ್ಕಿದ್ದಾರೆ.

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

3 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

5 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

5 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

5 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

7 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

8 hours ago