ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ( ಫೆಬ್ರವರಿ 1 ) ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದರು. ದೇಶಿ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷ ದ್ವೀಪ ಸೇರಿದಂತೆ ಹಲವು ದ್ವೀಪಗಳ ಅಭಿವೃದ್ಧಿ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ ತಿಳಿಸಿದರು.
ಈ ಮೂಲಕ ಮತ್ತೊಮ್ಮೆ ಭಾರತ ಮಾಲ್ಡೀವ್ಸ್ಗೆ ಶಾಕ್ ಕೊಟ್ಟಿದೆ. ಹೌದು, ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲಕ್ಷದ್ವೀಪ ಪ್ರವಾಸ ಕೈಗೊಂಡು ಅಲ್ಲಿನ ಬೀಚ್ನಲ್ಲಿ ತೆಗಿಸಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗ ಲಕ್ಷದ್ವೀಪ ಹಾಗೂ ಮಾಲ್ಡೀವ್ಸ್ ಹೋಲಿಕೆ ಮಾಡಿ ಸಾಕಷ್ಟು ಚರ್ಚೆಗಳು ನಡೆದಿದ್ದವು.
ಇತ್ತೀಚೆಗಷ್ಟೆ ಮಾಲ್ಡೀವ್ಸ್ ಪ್ರಧಾನಮಂತ್ರಿ ಚೀನಾ ಪ್ರವಾಸ ಕೈಗೊಂಡಿದ್ದು, ಈ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಮೋದಿ ಲಕ್ಷದ್ವೀಪಕ್ಕೆ ಒತ್ತು ಕೊಟ್ಟಿದ್ದು ಮಾಲ್ಡೀವ್ಸ್ ಪ್ರವಾಸದ ಮೇಲೆ ಪ್ರಭಾವ ಬೀರಿದ ಕಾರಣ ಮಾಲ್ಡೀವ್ಸ್ ಪ್ರಧಾನಿ ಭಾರತದ ಜತೆ ಸಮಾಧಾನಕರ ಸಂಬಂಧವನ್ನು ಹೊಂದಿಲ್ಲದ ರಾಷ್ಟ್ರಗಳಲ್ಲೊಂದು ಎಂದೇ ಕರೆಯಲ್ಪಡುವ ಚೀನಾ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದೂ ಸಹ ನೆಟ್ಟಿಗರು ಮಾತನಾಡಿಕೊಳ್ಳಲಾರಂಭಿಸಿದ್ದರು. ಹೀಗಾಗಿ ಬಜೆಟ್ನಲ್ಲಿ ಲಕ್ಷದ್ವೀಪದ ಅಭಿವೃದ್ಧಿ ಬಗ್ಗೆ ಉಲ್ಲೇಖಿಸಿದ್ದು ಮಾಲ್ಡೀವ್ಸ್ಗೆ ಭಾರತ ಪರೋಕ್ಷವಾಗಿ ಕೊಟ್ಟ ಕೌಂಟರ್ ಎಂದೇ ಹೇಳಲಾಗುತ್ತಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…