ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ( ಫೆಬ್ರವರಿ 1 ) ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದರು. ದೇಶಿ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷ ದ್ವೀಪ ಸೇರಿದಂತೆ ಹಲವು ದ್ವೀಪಗಳ ಅಭಿವೃದ್ಧಿ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ ತಿಳಿಸಿದರು.
ಈ ಮೂಲಕ ಮತ್ತೊಮ್ಮೆ ಭಾರತ ಮಾಲ್ಡೀವ್ಸ್ಗೆ ಶಾಕ್ ಕೊಟ್ಟಿದೆ. ಹೌದು, ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲಕ್ಷದ್ವೀಪ ಪ್ರವಾಸ ಕೈಗೊಂಡು ಅಲ್ಲಿನ ಬೀಚ್ನಲ್ಲಿ ತೆಗಿಸಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗ ಲಕ್ಷದ್ವೀಪ ಹಾಗೂ ಮಾಲ್ಡೀವ್ಸ್ ಹೋಲಿಕೆ ಮಾಡಿ ಸಾಕಷ್ಟು ಚರ್ಚೆಗಳು ನಡೆದಿದ್ದವು.
ಇತ್ತೀಚೆಗಷ್ಟೆ ಮಾಲ್ಡೀವ್ಸ್ ಪ್ರಧಾನಮಂತ್ರಿ ಚೀನಾ ಪ್ರವಾಸ ಕೈಗೊಂಡಿದ್ದು, ಈ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಮೋದಿ ಲಕ್ಷದ್ವೀಪಕ್ಕೆ ಒತ್ತು ಕೊಟ್ಟಿದ್ದು ಮಾಲ್ಡೀವ್ಸ್ ಪ್ರವಾಸದ ಮೇಲೆ ಪ್ರಭಾವ ಬೀರಿದ ಕಾರಣ ಮಾಲ್ಡೀವ್ಸ್ ಪ್ರಧಾನಿ ಭಾರತದ ಜತೆ ಸಮಾಧಾನಕರ ಸಂಬಂಧವನ್ನು ಹೊಂದಿಲ್ಲದ ರಾಷ್ಟ್ರಗಳಲ್ಲೊಂದು ಎಂದೇ ಕರೆಯಲ್ಪಡುವ ಚೀನಾ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದೂ ಸಹ ನೆಟ್ಟಿಗರು ಮಾತನಾಡಿಕೊಳ್ಳಲಾರಂಭಿಸಿದ್ದರು. ಹೀಗಾಗಿ ಬಜೆಟ್ನಲ್ಲಿ ಲಕ್ಷದ್ವೀಪದ ಅಭಿವೃದ್ಧಿ ಬಗ್ಗೆ ಉಲ್ಲೇಖಿಸಿದ್ದು ಮಾಲ್ಡೀವ್ಸ್ಗೆ ಭಾರತ ಪರೋಕ್ಷವಾಗಿ ಕೊಟ್ಟ ಕೌಂಟರ್ ಎಂದೇ ಹೇಳಲಾಗುತ್ತಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…