ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ( ಫೆಬ್ರವರಿ 1 ) ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದರು. ದೇಶಿ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷ ದ್ವೀಪ ಸೇರಿದಂತೆ ಹಲವು ದ್ವೀಪಗಳ ಅಭಿವೃದ್ಧಿ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ ತಿಳಿಸಿದರು.
ಈ ಮೂಲಕ ಮತ್ತೊಮ್ಮೆ ಭಾರತ ಮಾಲ್ಡೀವ್ಸ್ಗೆ ಶಾಕ್ ಕೊಟ್ಟಿದೆ. ಹೌದು, ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲಕ್ಷದ್ವೀಪ ಪ್ರವಾಸ ಕೈಗೊಂಡು ಅಲ್ಲಿನ ಬೀಚ್ನಲ್ಲಿ ತೆಗಿಸಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗ ಲಕ್ಷದ್ವೀಪ ಹಾಗೂ ಮಾಲ್ಡೀವ್ಸ್ ಹೋಲಿಕೆ ಮಾಡಿ ಸಾಕಷ್ಟು ಚರ್ಚೆಗಳು ನಡೆದಿದ್ದವು.
ಇತ್ತೀಚೆಗಷ್ಟೆ ಮಾಲ್ಡೀವ್ಸ್ ಪ್ರಧಾನಮಂತ್ರಿ ಚೀನಾ ಪ್ರವಾಸ ಕೈಗೊಂಡಿದ್ದು, ಈ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಮೋದಿ ಲಕ್ಷದ್ವೀಪಕ್ಕೆ ಒತ್ತು ಕೊಟ್ಟಿದ್ದು ಮಾಲ್ಡೀವ್ಸ್ ಪ್ರವಾಸದ ಮೇಲೆ ಪ್ರಭಾವ ಬೀರಿದ ಕಾರಣ ಮಾಲ್ಡೀವ್ಸ್ ಪ್ರಧಾನಿ ಭಾರತದ ಜತೆ ಸಮಾಧಾನಕರ ಸಂಬಂಧವನ್ನು ಹೊಂದಿಲ್ಲದ ರಾಷ್ಟ್ರಗಳಲ್ಲೊಂದು ಎಂದೇ ಕರೆಯಲ್ಪಡುವ ಚೀನಾ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದೂ ಸಹ ನೆಟ್ಟಿಗರು ಮಾತನಾಡಿಕೊಳ್ಳಲಾರಂಭಿಸಿದ್ದರು. ಹೀಗಾಗಿ ಬಜೆಟ್ನಲ್ಲಿ ಲಕ್ಷದ್ವೀಪದ ಅಭಿವೃದ್ಧಿ ಬಗ್ಗೆ ಉಲ್ಲೇಖಿಸಿದ್ದು ಮಾಲ್ಡೀವ್ಸ್ಗೆ ಭಾರತ ಪರೋಕ್ಷವಾಗಿ ಕೊಟ್ಟ ಕೌಂಟರ್ ಎಂದೇ ಹೇಳಲಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…