ರಾಷ್ಟ್ರೀಯ

Union Budget 2024: ಲಕ್ಷದ್ವೀಪವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಯೋಜನೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ( ಫೆಬ್ರವರಿ 1 ) ಕೇಂದ್ರ ಮಧ್ಯಂತರ ಬಜೆಟ್‌ ಮಂಡಿಸಿದರು. ದೇಶಿ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷ ದ್ವೀಪ ಸೇರಿದಂತೆ ಹಲವು ದ್ವೀಪಗಳ ಅಭಿವೃದ್ಧಿ ಮಾಡುವುದಾಗಿ ನಿರ್ಮಲಾ ಸೀತಾರಾಮನ್‌ ಭಾಷಣದಲ್ಲಿ ತಿಳಿಸಿದರು.

ಈ ಮೂಲಕ ಮತ್ತೊಮ್ಮೆ ಭಾರತ ಮಾಲ್ಡೀವ್ಸ್‌ಗೆ ಶಾಕ್‌ ಕೊಟ್ಟಿದೆ. ಹೌದು, ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲಕ್ಷದ್ವೀಪ ಪ್ರವಾಸ ಕೈಗೊಂಡು ಅಲ್ಲಿನ ಬೀಚ್‌ನಲ್ಲಿ ತೆಗಿಸಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗ ಲಕ್ಷದ್ವೀಪ ಹಾಗೂ ಮಾಲ್ಡೀವ್ಸ್‌ ಹೋಲಿಕೆ ಮಾಡಿ ಸಾಕಷ್ಟು ಚರ್ಚೆಗಳು ನಡೆದಿದ್ದವು.

ಇತ್ತೀಚೆಗಷ್ಟೆ ಮಾಲ್ಡೀವ್ಸ್‌ ಪ್ರಧಾನಮಂತ್ರಿ ಚೀನಾ ಪ್ರವಾಸ ಕೈಗೊಂಡಿದ್ದು, ಈ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಮೋದಿ ಲಕ್ಷದ್ವೀಪಕ್ಕೆ ಒತ್ತು ಕೊಟ್ಟಿದ್ದು ಮಾಲ್ಡೀವ್ಸ್‌ ಪ್ರವಾಸದ ಮೇಲೆ ಪ್ರಭಾವ ಬೀರಿದ ಕಾರಣ ಮಾಲ್ಡೀವ್ಸ್‌ ಪ್ರಧಾನಿ ಭಾರತದ ಜತೆ ಸಮಾಧಾನಕರ ಸಂಬಂಧವನ್ನು ಹೊಂದಿಲ್ಲದ ರಾಷ್ಟ್ರಗಳಲ್ಲೊಂದು ಎಂದೇ ಕರೆಯಲ್ಪಡುವ ಚೀನಾ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದೂ ಸಹ ನೆಟ್ಟಿಗರು ಮಾತನಾಡಿಕೊಳ್ಳಲಾರಂಭಿಸಿದ್ದರು. ಹೀಗಾಗಿ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿ ಬಗ್ಗೆ ಉಲ್ಲೇಖಿಸಿದ್ದು ಮಾಲ್ಡೀವ್ಸ್‌ಗೆ ಭಾರತ ಪರೋಕ್ಷವಾಗಿ ಕೊಟ್ಟ ಕೌಂಟರ್‌ ಎಂದೇ ಹೇಳಲಾಗುತ್ತಿದೆ. 

andolana

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago