ರಾಷ್ಟ್ರೀಯ

Union Budget 2024: ಲಕ್ಷದ್ವೀಪವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಯೋಜನೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ( ಫೆಬ್ರವರಿ 1 ) ಕೇಂದ್ರ ಮಧ್ಯಂತರ ಬಜೆಟ್‌ ಮಂಡಿಸಿದರು. ದೇಶಿ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷ ದ್ವೀಪ ಸೇರಿದಂತೆ ಹಲವು ದ್ವೀಪಗಳ ಅಭಿವೃದ್ಧಿ ಮಾಡುವುದಾಗಿ ನಿರ್ಮಲಾ ಸೀತಾರಾಮನ್‌ ಭಾಷಣದಲ್ಲಿ ತಿಳಿಸಿದರು.

ಈ ಮೂಲಕ ಮತ್ತೊಮ್ಮೆ ಭಾರತ ಮಾಲ್ಡೀವ್ಸ್‌ಗೆ ಶಾಕ್‌ ಕೊಟ್ಟಿದೆ. ಹೌದು, ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲಕ್ಷದ್ವೀಪ ಪ್ರವಾಸ ಕೈಗೊಂಡು ಅಲ್ಲಿನ ಬೀಚ್‌ನಲ್ಲಿ ತೆಗಿಸಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗ ಲಕ್ಷದ್ವೀಪ ಹಾಗೂ ಮಾಲ್ಡೀವ್ಸ್‌ ಹೋಲಿಕೆ ಮಾಡಿ ಸಾಕಷ್ಟು ಚರ್ಚೆಗಳು ನಡೆದಿದ್ದವು.

ಇತ್ತೀಚೆಗಷ್ಟೆ ಮಾಲ್ಡೀವ್ಸ್‌ ಪ್ರಧಾನಮಂತ್ರಿ ಚೀನಾ ಪ್ರವಾಸ ಕೈಗೊಂಡಿದ್ದು, ಈ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಮೋದಿ ಲಕ್ಷದ್ವೀಪಕ್ಕೆ ಒತ್ತು ಕೊಟ್ಟಿದ್ದು ಮಾಲ್ಡೀವ್ಸ್‌ ಪ್ರವಾಸದ ಮೇಲೆ ಪ್ರಭಾವ ಬೀರಿದ ಕಾರಣ ಮಾಲ್ಡೀವ್ಸ್‌ ಪ್ರಧಾನಿ ಭಾರತದ ಜತೆ ಸಮಾಧಾನಕರ ಸಂಬಂಧವನ್ನು ಹೊಂದಿಲ್ಲದ ರಾಷ್ಟ್ರಗಳಲ್ಲೊಂದು ಎಂದೇ ಕರೆಯಲ್ಪಡುವ ಚೀನಾ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದೂ ಸಹ ನೆಟ್ಟಿಗರು ಮಾತನಾಡಿಕೊಳ್ಳಲಾರಂಭಿಸಿದ್ದರು. ಹೀಗಾಗಿ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿ ಬಗ್ಗೆ ಉಲ್ಲೇಖಿಸಿದ್ದು ಮಾಲ್ಡೀವ್ಸ್‌ಗೆ ಭಾರತ ಪರೋಕ್ಷವಾಗಿ ಕೊಟ್ಟ ಕೌಂಟರ್‌ ಎಂದೇ ಹೇಳಲಾಗುತ್ತಿದೆ. 

andolana

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

2 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

4 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

7 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

7 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

7 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

10 hours ago