ರಾಷ್ಟ್ರೀಯ

Union Budget-2024: ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ

ನವದೆಹಲಿ: ಅಯೋಧ್ಯೆಯಲ್ಲಿನ ರಾಮಮಂದಿರ ಉದ್ಘಾಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯೋದಯ ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಸೋಲಾರ್‌ ಮೇಲ್ಚಾವಣಿ ಯೋಜನೆ ಘೋಷಿಸಿದ್ದರು.

ಇಂದು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್‌ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇತ್ತೀಚೆಗೆ ಘೋಷಣೆಯಾದ `ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಗೆ ವಿಶೇಷ ಒತ್ತು ನೀಡಲಾಗಿದೆ. ಈ ಯೋಜನೆ ಬಗ್ಗೆ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷವಾದ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಯೋಜನೆಯ ಮೂಲಕ ಒಂದು ಕೋಟಿ ಮನೆಗಳಲ್ಲಿ ಸೌರ ಮೇಲ್ಛಾವಣಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ಒಂದು ಮನೆಗೆ ತಿಂಗಳಿಗೆ ಸುಮಾರು 300 ಯೂನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ವಾರ್ಷಿಕವಾಗಿ 15,000-18,000 ರೂ.ಗಳ ಉಳಿತಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಸ್ವಾಮ್ಯದ ಆರ್‌ಇಸಿ ಲಿಮಿಟೆಡ್‍ನ್ನು ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಒಂದು ವರ್ಷದೊಳಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿ ಸೌರ ಅಳವಡಿಕೆಗಳನ್ನು ಹೊಂದುವ ಗುರಿಯನ್ನು ಹೊಂದಿದೆ.

andolanait

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

2 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

2 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

2 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

2 hours ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

2 hours ago