ರಾಷ್ಟ್ರೀಯ

Union Budget-2024: ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ

ನವದೆಹಲಿ: ಅಯೋಧ್ಯೆಯಲ್ಲಿನ ರಾಮಮಂದಿರ ಉದ್ಘಾಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯೋದಯ ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಸೋಲಾರ್‌ ಮೇಲ್ಚಾವಣಿ ಯೋಜನೆ ಘೋಷಿಸಿದ್ದರು.

ಇಂದು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್‌ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇತ್ತೀಚೆಗೆ ಘೋಷಣೆಯಾದ `ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಗೆ ವಿಶೇಷ ಒತ್ತು ನೀಡಲಾಗಿದೆ. ಈ ಯೋಜನೆ ಬಗ್ಗೆ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷವಾದ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಯೋಜನೆಯ ಮೂಲಕ ಒಂದು ಕೋಟಿ ಮನೆಗಳಲ್ಲಿ ಸೌರ ಮೇಲ್ಛಾವಣಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ಒಂದು ಮನೆಗೆ ತಿಂಗಳಿಗೆ ಸುಮಾರು 300 ಯೂನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ವಾರ್ಷಿಕವಾಗಿ 15,000-18,000 ರೂ.ಗಳ ಉಳಿತಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಸ್ವಾಮ್ಯದ ಆರ್‌ಇಸಿ ಲಿಮಿಟೆಡ್‍ನ್ನು ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಒಂದು ವರ್ಷದೊಳಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿ ಸೌರ ಅಳವಡಿಕೆಗಳನ್ನು ಹೊಂದುವ ಗುರಿಯನ್ನು ಹೊಂದಿದೆ.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago