ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದಾಗಿ ಕೆಲಸ ನಿರ್ವಹಿಸುತ್ತಿದ್ದ 41 ಕಾರ್ಮಿಕರು ಸಿಲುಕಿಹಾಕಿಕೊಂಡಿದ್ದರು. ನವೆಂಬರ್ 12ರಂದು ಸುರಂಗ ಕುಸಿತ ಸಂಭವಿಸಿದ್ದು, ಬರೋಬ್ಬರಿ 16 ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕಾರ್ಮಿಕರು ಸಿಲುಕಿದ್ದ ಸಮೀಪಕ್ಕೆ ರಕ್ಷಣಾ ಸಿಬ್ಬಂದಿ ತಲುಪಿದ್ದಾರೆ.
ಕಾರ್ಮಿಕರು ಇರುವ ಸನಿಹದವರೆಗೂ ಪೈಪ್ ಅಳವಡಿಕೆ ಕಾರ್ಯ ಸದ್ಯ ಯಶಸ್ವಿಯಾಗಿದ್ದು ಇಂದು ಮಧ್ಯರಾತ್ರಿಯೊಳಗೆ ಎಲ್ಲಾ 41 ಕಾರ್ಮಿಕರನ್ನು ಹೊರ ಕರೆತರಲಾಗಲಿದೆ. ಸಿಲುಕಿರುವ ಕಾರ್ಮಿಕರನ್ನು ಹಗ್ಗಕ್ಕೆ ಸ್ಟ್ರೆಚರ್ ಕಟ್ಟಿ ಅಳವಡಿಸಿರುವ ಪೈಪ್ ಮುಖಾಂತರ ಹೊರತೆಗೆಯುವ ಯೋಜನೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹೆಣೆದಿದೆ.
ಇನ್ನು ಈ ಯೋಜನೆ ಮೂಲಕ ಓರ್ವ ಕಾರ್ಮಿಕನನ್ನು ಆಚೆ ತೆಗೆಯಲು ಸುಮಾರು 5 ನಿಮಿಷಗಳ ಸಮಯ ಬೇಕಾಗಿದ್ದು, ಒಬ್ಬೊಬ್ಬರನ್ನಾಗಿ ಎಲ್ಲಾ 41 ಕಾರ್ಮಿಕರನ್ನು ಹೊರತೆಗೆಯಲು 3 ಗಂಟೆ 45 ನಿಮಿಷಗಳು ಬೇಕಾಗಲಿದೆ. ಇನ್ನು ಹೊರತೆಗೆದ ಕಾರ್ಮಿಕರನ್ನು ತಕ್ಷಣವೇ ಆಮ್ಲಜನಕ ಸೌಲಭ್ಯವುಳ್ಳ ಆಂಬುಲೆನ್ಸ್ ಮೂಲಕ 30 ಕಿಲೋಮೀಟರ್ ದೂರದಲ್ಲಿರುವ ಚಿನ್ಯಾಲಿಸೌರ್ನಲ್ಲಿರುವ ಸಮುದಾಯ ಕೇಂದ್ರಕ್ಕೆ ಸಾಗಿಸಲಾಗಲಿದ್ದು ಅಲ್ಲಿ ಎಲ್ಲಾ ಕಾರ್ಮಿಕರಿಗೂ ಆಮ್ಲಜನಕ ಬೆಂಬಲಿತ ಬೆಡ್ಗಳುಳ್ಳ ಪ್ರತ್ಯೇಕ ವಾರ್ಡ್ಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…