ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದಾಗಿ ಕೆಲಸ ನಿರ್ವಹಿಸುತ್ತಿದ್ದ 41 ಕಾರ್ಮಿಕರು ಸಿಲುಕಿಹಾಕಿಕೊಂಡಿದ್ದರು. ನವೆಂಬರ್ 12ರಂದು ಸುರಂಗ ಕುಸಿತ ಸಂಭವಿಸಿದ್ದು, ಬರೋಬ್ಬರಿ 16 ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕಾರ್ಮಿಕರು ಸಿಲುಕಿದ್ದ ಸಮೀಪಕ್ಕೆ ರಕ್ಷಣಾ ಸಿಬ್ಬಂದಿ ತಲುಪಿದ್ದಾರೆ.
ಕಾರ್ಮಿಕರು ಇರುವ ಸನಿಹದವರೆಗೂ ಪೈಪ್ ಅಳವಡಿಕೆ ಕಾರ್ಯ ಸದ್ಯ ಯಶಸ್ವಿಯಾಗಿದ್ದು ಇಂದು ಮಧ್ಯರಾತ್ರಿಯೊಳಗೆ ಎಲ್ಲಾ 41 ಕಾರ್ಮಿಕರನ್ನು ಹೊರ ಕರೆತರಲಾಗಲಿದೆ. ಸಿಲುಕಿರುವ ಕಾರ್ಮಿಕರನ್ನು ಹಗ್ಗಕ್ಕೆ ಸ್ಟ್ರೆಚರ್ ಕಟ್ಟಿ ಅಳವಡಿಸಿರುವ ಪೈಪ್ ಮುಖಾಂತರ ಹೊರತೆಗೆಯುವ ಯೋಜನೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹೆಣೆದಿದೆ.
ಇನ್ನು ಈ ಯೋಜನೆ ಮೂಲಕ ಓರ್ವ ಕಾರ್ಮಿಕನನ್ನು ಆಚೆ ತೆಗೆಯಲು ಸುಮಾರು 5 ನಿಮಿಷಗಳ ಸಮಯ ಬೇಕಾಗಿದ್ದು, ಒಬ್ಬೊಬ್ಬರನ್ನಾಗಿ ಎಲ್ಲಾ 41 ಕಾರ್ಮಿಕರನ್ನು ಹೊರತೆಗೆಯಲು 3 ಗಂಟೆ 45 ನಿಮಿಷಗಳು ಬೇಕಾಗಲಿದೆ. ಇನ್ನು ಹೊರತೆಗೆದ ಕಾರ್ಮಿಕರನ್ನು ತಕ್ಷಣವೇ ಆಮ್ಲಜನಕ ಸೌಲಭ್ಯವುಳ್ಳ ಆಂಬುಲೆನ್ಸ್ ಮೂಲಕ 30 ಕಿಲೋಮೀಟರ್ ದೂರದಲ್ಲಿರುವ ಚಿನ್ಯಾಲಿಸೌರ್ನಲ್ಲಿರುವ ಸಮುದಾಯ ಕೇಂದ್ರಕ್ಕೆ ಸಾಗಿಸಲಾಗಲಿದ್ದು ಅಲ್ಲಿ ಎಲ್ಲಾ ಕಾರ್ಮಿಕರಿಗೂ ಆಮ್ಲಜನಕ ಬೆಂಬಲಿತ ಬೆಡ್ಗಳುಳ್ಳ ಪ್ರತ್ಯೇಕ ವಾರ್ಡ್ಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…