ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದಾಗಿ ಕೆಲಸ ನಿರ್ವಹಿಸುತ್ತಿದ್ದ 41 ಕಾರ್ಮಿಕರು ಸಿಲುಕಿಹಾಕಿಕೊಂಡಿದ್ದರು. ನವೆಂಬರ್ 12ರಂದು ಸುರಂಗ ಕುಸಿತ ಸಂಭವಿಸಿದ್ದು, ಬರೋಬ್ಬರಿ 16 ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕಾರ್ಮಿಕರು ಸಿಲುಕಿದ್ದ ಸಮೀಪಕ್ಕೆ ರಕ್ಷಣಾ ಸಿಬ್ಬಂದಿ ತಲುಪಿದ್ದಾರೆ.
ಕಾರ್ಮಿಕರು ಇರುವ ಸನಿಹದವರೆಗೂ ಪೈಪ್ ಅಳವಡಿಕೆ ಕಾರ್ಯ ಸದ್ಯ ಯಶಸ್ವಿಯಾಗಿದ್ದು ಇಂದು ಮಧ್ಯರಾತ್ರಿಯೊಳಗೆ ಎಲ್ಲಾ 41 ಕಾರ್ಮಿಕರನ್ನು ಹೊರ ಕರೆತರಲಾಗಲಿದೆ. ಸಿಲುಕಿರುವ ಕಾರ್ಮಿಕರನ್ನು ಹಗ್ಗಕ್ಕೆ ಸ್ಟ್ರೆಚರ್ ಕಟ್ಟಿ ಅಳವಡಿಸಿರುವ ಪೈಪ್ ಮುಖಾಂತರ ಹೊರತೆಗೆಯುವ ಯೋಜನೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹೆಣೆದಿದೆ.
ಇನ್ನು ಈ ಯೋಜನೆ ಮೂಲಕ ಓರ್ವ ಕಾರ್ಮಿಕನನ್ನು ಆಚೆ ತೆಗೆಯಲು ಸುಮಾರು 5 ನಿಮಿಷಗಳ ಸಮಯ ಬೇಕಾಗಿದ್ದು, ಒಬ್ಬೊಬ್ಬರನ್ನಾಗಿ ಎಲ್ಲಾ 41 ಕಾರ್ಮಿಕರನ್ನು ಹೊರತೆಗೆಯಲು 3 ಗಂಟೆ 45 ನಿಮಿಷಗಳು ಬೇಕಾಗಲಿದೆ. ಇನ್ನು ಹೊರತೆಗೆದ ಕಾರ್ಮಿಕರನ್ನು ತಕ್ಷಣವೇ ಆಮ್ಲಜನಕ ಸೌಲಭ್ಯವುಳ್ಳ ಆಂಬುಲೆನ್ಸ್ ಮೂಲಕ 30 ಕಿಲೋಮೀಟರ್ ದೂರದಲ್ಲಿರುವ ಚಿನ್ಯಾಲಿಸೌರ್ನಲ್ಲಿರುವ ಸಮುದಾಯ ಕೇಂದ್ರಕ್ಕೆ ಸಾಗಿಸಲಾಗಲಿದ್ದು ಅಲ್ಲಿ ಎಲ್ಲಾ ಕಾರ್ಮಿಕರಿಗೂ ಆಮ್ಲಜನಕ ಬೆಂಬಲಿತ ಬೆಡ್ಗಳುಳ್ಳ ಪ್ರತ್ಯೇಕ ವಾರ್ಡ್ಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ.
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…