ರಾಷ್ಟ್ರೀಯ

ಮೈಸೂರು – ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್;‌ ಈ ದಿನದವರೆಗೆ ಬುಧವಾರವೂ ಸಂಚಾರ

ವಂದೇ ಭಾರತ್‌ ಭಾರತೀಯ ರೈಲ್ವೆಯ ಇತ್ತೀಚೆಗಿನ ಜನಪ್ರಿಯ ರೈಲುಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿದೆ. ಇದೀಗ ರೈಲ್ವೆ ಇಲಾಖೆ ಮೈಸೂರು ಹಾಗೂ ಚೆನ್ನೈ ಸೆಂಟ್ರಲ್‌ ನಡುವೆ ಬುಧವಾರವೂ ವಂದೇ ಭಾರತ್‌ ರೈಲನ್ನು ಓಡಿಸುವ ತೀರ್ಮಾನಕ್ಕೆ ಬಂದಿದೆ.

ಹೌದು, ಮೈಸೂರು ಹಾಗೂ ಚೆನ್ನೈ ನಗರಗಳ ನಡುವೆ ಬುಧವಾರ ಹೊರತುಪಡಿಸಿ ವಾರದ ಉಳಿದ ಎಲ್ಲಾ ದಿನಗಳೂ ಸಹ ವಂದೇ ಭಾರತ್‌ ರೈಲು ಸಂಚರಿಸುತ್ತಿತ್ತು. ಇದೀಗ ವರ್ಷಾಂತ್ಯ, ಕ್ರಿಸ್‌ಮಸ್‌ ಹಾಗೂ ಹೊಸವರ್ಷದ ಸಲುವಾಗಿ ಹೆಚ್ಚಿನ ಪ್ರಯಾಣಿಕರು ಸಂಚರಿಸುವುದನ್ನು ಗುರಿಯನ್ನಾಗಿಸಿಕೊಂಡು ನಿನ್ನೆಯಿಂದ ( ನವೆಂಬರ್‌ 29 ) ಡಿಸೆಂಬರ್‌ 27ರವರೆಗೂ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಮೈಸೂರಿನಿಂದ ಚೆನ್ನೈವರೆಗೆ ಆಯೋಜಿಸಲಾಗಿದೆ. ಈ ರೈಲು ಬೆಂಗಳೂರು ಹಾಗೂ ಕಟಪಾಡಿ ಈ ಎರಡು ನಿಲ್ದಾಣಗಳಲ್ಲಿ ಮಾತ್ರ ನಿಲ್ಲಲಿದೆ.

ಈ ರೈಲು ಚೆನ್ನೈ ಹಾಗೂ ಮೈಸೂರು ನಡುವೆ 06037 ಮತ್ತು ಮೈಸೂರು ಹಾಗೂ ಚೆನ್ನೈ ನಡುವೆ 06038 ಸಂಖ್ಯೆಯನ್ನು ಹೊಂದಿರಲಿದೆ. ಇನ್ನು ಈ ರೈಲು 500 ಕಿಲೋಮೀಟರ್‌ ವೇಗವನ್ನು 6 ಗಂಟೆ 30 ನಿಮಿಷಗಳಲ್ಲಿ ಕ್ರಮಿಸಲಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಅತಿವೇಗದ ರೈಲು ಎಂದು ಗುರುತಿಸಿಕೊಂಡಿದೆ.

 

andolana

Recent Posts

ಎಸ್‌ಸಿ,ಎಸ್‌ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ

ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…

10 seconds ago

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

1 hour ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

2 hours ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

2 hours ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

2 hours ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

3 hours ago