ವಂದೇ ಭಾರತ್ ಭಾರತೀಯ ರೈಲ್ವೆಯ ಇತ್ತೀಚೆಗಿನ ಜನಪ್ರಿಯ ರೈಲುಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿದೆ. ಇದೀಗ ರೈಲ್ವೆ ಇಲಾಖೆ ಮೈಸೂರು ಹಾಗೂ ಚೆನ್ನೈ ಸೆಂಟ್ರಲ್ ನಡುವೆ ಬುಧವಾರವೂ ವಂದೇ ಭಾರತ್ ರೈಲನ್ನು ಓಡಿಸುವ ತೀರ್ಮಾನಕ್ಕೆ ಬಂದಿದೆ.
ಹೌದು, ಮೈಸೂರು ಹಾಗೂ ಚೆನ್ನೈ ನಗರಗಳ ನಡುವೆ ಬುಧವಾರ ಹೊರತುಪಡಿಸಿ ವಾರದ ಉಳಿದ ಎಲ್ಲಾ ದಿನಗಳೂ ಸಹ ವಂದೇ ಭಾರತ್ ರೈಲು ಸಂಚರಿಸುತ್ತಿತ್ತು. ಇದೀಗ ವರ್ಷಾಂತ್ಯ, ಕ್ರಿಸ್ಮಸ್ ಹಾಗೂ ಹೊಸವರ್ಷದ ಸಲುವಾಗಿ ಹೆಚ್ಚಿನ ಪ್ರಯಾಣಿಕರು ಸಂಚರಿಸುವುದನ್ನು ಗುರಿಯನ್ನಾಗಿಸಿಕೊಂಡು ನಿನ್ನೆಯಿಂದ ( ನವೆಂಬರ್ 29 ) ಡಿಸೆಂಬರ್ 27ರವರೆಗೂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮೈಸೂರಿನಿಂದ ಚೆನ್ನೈವರೆಗೆ ಆಯೋಜಿಸಲಾಗಿದೆ. ಈ ರೈಲು ಬೆಂಗಳೂರು ಹಾಗೂ ಕಟಪಾಡಿ ಈ ಎರಡು ನಿಲ್ದಾಣಗಳಲ್ಲಿ ಮಾತ್ರ ನಿಲ್ಲಲಿದೆ.
ಈ ರೈಲು ಚೆನ್ನೈ ಹಾಗೂ ಮೈಸೂರು ನಡುವೆ 06037 ಮತ್ತು ಮೈಸೂರು ಹಾಗೂ ಚೆನ್ನೈ ನಡುವೆ 06038 ಸಂಖ್ಯೆಯನ್ನು ಹೊಂದಿರಲಿದೆ. ಇನ್ನು ಈ ರೈಲು 500 ಕಿಲೋಮೀಟರ್ ವೇಗವನ್ನು 6 ಗಂಟೆ 30 ನಿಮಿಷಗಳಲ್ಲಿ ಕ್ರಮಿಸಲಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಅತಿವೇಗದ ರೈಲು ಎಂದು ಗುರುತಿಸಿಕೊಂಡಿದೆ.
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…
ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…