ವಂದೇ ಭಾರತ್ ಭಾರತೀಯ ರೈಲ್ವೆಯ ಇತ್ತೀಚೆಗಿನ ಜನಪ್ರಿಯ ರೈಲುಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿದೆ. ಇದೀಗ ರೈಲ್ವೆ ಇಲಾಖೆ ಮೈಸೂರು ಹಾಗೂ ಚೆನ್ನೈ ಸೆಂಟ್ರಲ್ ನಡುವೆ ಬುಧವಾರವೂ ವಂದೇ ಭಾರತ್ ರೈಲನ್ನು ಓಡಿಸುವ ತೀರ್ಮಾನಕ್ಕೆ ಬಂದಿದೆ.
ಹೌದು, ಮೈಸೂರು ಹಾಗೂ ಚೆನ್ನೈ ನಗರಗಳ ನಡುವೆ ಬುಧವಾರ ಹೊರತುಪಡಿಸಿ ವಾರದ ಉಳಿದ ಎಲ್ಲಾ ದಿನಗಳೂ ಸಹ ವಂದೇ ಭಾರತ್ ರೈಲು ಸಂಚರಿಸುತ್ತಿತ್ತು. ಇದೀಗ ವರ್ಷಾಂತ್ಯ, ಕ್ರಿಸ್ಮಸ್ ಹಾಗೂ ಹೊಸವರ್ಷದ ಸಲುವಾಗಿ ಹೆಚ್ಚಿನ ಪ್ರಯಾಣಿಕರು ಸಂಚರಿಸುವುದನ್ನು ಗುರಿಯನ್ನಾಗಿಸಿಕೊಂಡು ನಿನ್ನೆಯಿಂದ ( ನವೆಂಬರ್ 29 ) ಡಿಸೆಂಬರ್ 27ರವರೆಗೂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮೈಸೂರಿನಿಂದ ಚೆನ್ನೈವರೆಗೆ ಆಯೋಜಿಸಲಾಗಿದೆ. ಈ ರೈಲು ಬೆಂಗಳೂರು ಹಾಗೂ ಕಟಪಾಡಿ ಈ ಎರಡು ನಿಲ್ದಾಣಗಳಲ್ಲಿ ಮಾತ್ರ ನಿಲ್ಲಲಿದೆ.
ಈ ರೈಲು ಚೆನ್ನೈ ಹಾಗೂ ಮೈಸೂರು ನಡುವೆ 06037 ಮತ್ತು ಮೈಸೂರು ಹಾಗೂ ಚೆನ್ನೈ ನಡುವೆ 06038 ಸಂಖ್ಯೆಯನ್ನು ಹೊಂದಿರಲಿದೆ. ಇನ್ನು ಈ ರೈಲು 500 ಕಿಲೋಮೀಟರ್ ವೇಗವನ್ನು 6 ಗಂಟೆ 30 ನಿಮಿಷಗಳಲ್ಲಿ ಕ್ರಮಿಸಲಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಅತಿವೇಗದ ರೈಲು ಎಂದು ಗುರುತಿಸಿಕೊಂಡಿದೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…