ವಂದೇ ಭಾರತ್ ಭಾರತೀಯ ರೈಲ್ವೆಯ ಇತ್ತೀಚೆಗಿನ ಜನಪ್ರಿಯ ರೈಲುಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿದೆ. ಇದೀಗ ರೈಲ್ವೆ ಇಲಾಖೆ ಮೈಸೂರು ಹಾಗೂ ಚೆನ್ನೈ ಸೆಂಟ್ರಲ್ ನಡುವೆ ಬುಧವಾರವೂ ವಂದೇ ಭಾರತ್ ರೈಲನ್ನು ಓಡಿಸುವ ತೀರ್ಮಾನಕ್ಕೆ ಬಂದಿದೆ.
ಹೌದು, ಮೈಸೂರು ಹಾಗೂ ಚೆನ್ನೈ ನಗರಗಳ ನಡುವೆ ಬುಧವಾರ ಹೊರತುಪಡಿಸಿ ವಾರದ ಉಳಿದ ಎಲ್ಲಾ ದಿನಗಳೂ ಸಹ ವಂದೇ ಭಾರತ್ ರೈಲು ಸಂಚರಿಸುತ್ತಿತ್ತು. ಇದೀಗ ವರ್ಷಾಂತ್ಯ, ಕ್ರಿಸ್ಮಸ್ ಹಾಗೂ ಹೊಸವರ್ಷದ ಸಲುವಾಗಿ ಹೆಚ್ಚಿನ ಪ್ರಯಾಣಿಕರು ಸಂಚರಿಸುವುದನ್ನು ಗುರಿಯನ್ನಾಗಿಸಿಕೊಂಡು ನಿನ್ನೆಯಿಂದ ( ನವೆಂಬರ್ 29 ) ಡಿಸೆಂಬರ್ 27ರವರೆಗೂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮೈಸೂರಿನಿಂದ ಚೆನ್ನೈವರೆಗೆ ಆಯೋಜಿಸಲಾಗಿದೆ. ಈ ರೈಲು ಬೆಂಗಳೂರು ಹಾಗೂ ಕಟಪಾಡಿ ಈ ಎರಡು ನಿಲ್ದಾಣಗಳಲ್ಲಿ ಮಾತ್ರ ನಿಲ್ಲಲಿದೆ.
ಈ ರೈಲು ಚೆನ್ನೈ ಹಾಗೂ ಮೈಸೂರು ನಡುವೆ 06037 ಮತ್ತು ಮೈಸೂರು ಹಾಗೂ ಚೆನ್ನೈ ನಡುವೆ 06038 ಸಂಖ್ಯೆಯನ್ನು ಹೊಂದಿರಲಿದೆ. ಇನ್ನು ಈ ರೈಲು 500 ಕಿಲೋಮೀಟರ್ ವೇಗವನ್ನು 6 ಗಂಟೆ 30 ನಿಮಿಷಗಳಲ್ಲಿ ಕ್ರಮಿಸಲಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಅತಿವೇಗದ ರೈಲು ಎಂದು ಗುರುತಿಸಿಕೊಂಡಿದೆ.
ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…
ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…