ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವರುಣ್ ಗಾಂಧಿ ಅವರ ಭೇಟಿ ರಾಜಕೀಯ ವಲಯದಲ್ಲಿ ಹಲವಾರು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಉತ್ತರ ಪ್ರದೇಶದ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕೇದಾರನಾಥ ದೇವಾಲಯದಲ್ಲಿ ಒಟ್ಟಾಗಿ ದೇವರಿಗೆ ಪ್ರಾರ್ಥನೆ ಸಲ್ಲಿಸಲು ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.
ಸಾರ್ವಜನಿಕವಾಗಿ ಅಪರೂಪಕ್ಕೆ ಒಟ್ಟಿಗೆ ಕಾಣಿಸಿಕೊಳ್ಳುವ ಸೋದರ ಸಂಬಂಗಳ ನಡುವಿನ ಸಭೆಯು ವರುಣ್ ಗಾಂಧಿಯವರ ರಾಜಕೀಯ ಭವಿಷ್ಯದ ಬಗ್ಗೆ ಕೆಲವು ವಲಯಗಳಲ್ಲಿ ಭಾರಿ ಕುತೂಹಲ ಕೆರಳಿಸಿದೆ. ಸಂಜಯ್ ಗಾಂಧಿ ಮತ್ತು ಮೇನಕಾ ಗಾಂಧಿಯವರ ಪುತ್ರ ವರುಣ್ ಗಾಂಧಿ ಇತ್ತೀಚಿನ ತಿಂಗಳುಗಳಲ್ಲಿ ಪ್ರಮುಖ ಬಿಜೆಪಿ ಸಭೆಗಳಲ್ಲಿ ಕಾಣಿಸಿಕೊಂಡಿಲ್ಲ ಮತ್ತು ಈಗ ರದ್ದಾದ ಕೃಷಿ ಕಾನೂನುಗಳು ಸೇರಿದಂತೆ ನಿರ್ಣಾಯಕ ವಿಷಯಗಳ ಕುರಿತು ಅವರ ಕಾಮೆಂಟ್ಗಳು ಕೆಲವೊಮ್ಮೆ ಪಕ್ಷದ ನಿಲುವಿಗೆ ಭಿನ್ನವಾಗಿವೆ.
ಈ ಇಬ್ಬರು ಗಾಂಯರ ನಡುವಿನ ಸಭೆಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಪತ್ರಿಕಾಗೋಷ್ಠಿಯಲ್ಲಿ ವರುಣ್ ಗಾಂಯನ್ನು ಕಾಂಗ್ರೆಸ್ಗೆ ಸ್ವಾಗತಿಸುತ್ತೀರಾ ಎಂಬ ಪ್ರಶ್ನೆಗೆ ಕಾಂಗ್ರೆಸ್ ವಿರುದ್ಧ ಹೋರಾಡುತ್ತಿರುವ ಬಿಜೆಪಿ ಮತ್ತು ಆರ್ಎಸ್ಎಸ್ ಸಿದ್ಧಾಂತವನ್ನು ವರುಣ್ ಅಳವಡಿಸಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ರಾಹುಲ್ ಗಾಂಧಿ ಕಳೆದ ಮೂರು ದಿನಗಳಿಂದ ಉತ್ತರಾಖಂಡದ ಕೇದಾರನಾಥದಲ್ಲಿದ್ದು, ವರುಣ್ ಗಾಂಧಿ ಮಂಗಳವಾರ ತಮ್ಮ ಕುಟುಂಬದೊಂದಿಗೆ ಶಿವನಿಗೆ ಸಮರ್ಪಿತವಾದ ದೇವಾಲಯಕ್ಕೆ ಭೇಟಿ ನೀಡಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…