ರಾಷ್ಟ್ರೀಯ

ರಾಘವ್ ಚಡ್ಡಾ ಅಮಾನತು ಹಿಂಪಡೆದ ಉಪಾಧ್ಯಕ್ಷ ಜಗದೀಪ್ ಧಂಖರ್!

ನವದೆಹಲಿ : ರಾಜ್ಯಸಭೆಯಿಂದ ಅಮಾನತುಗೊಂಡಿದ್ದ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರ ಅಮಾನತನ್ನು ಉಪಾಧ್ಯಕ್ಷ ಜಗದೀಪ್‌ ಧಂಖರ್‌ ಹಿಂಪಡೆದಿದ್ದಾರೆ.

ದೆಹಲಿಯಲ್ಲಿ ಕೇಂದ್ರೀಯ ಕೇಡರ್ ಅಧಿಕಾರಿಗಳ ಪೋಸ್ಟಿಂಗ್ ಮತ್ತು ವರ್ಗಾವಣೆಯ ವಿಷಯದ ಕುರಿತು ಮಾಡಿದ ಕಾನೂನಿಗೆ ಕೆಲವು ಸದಸ್ಯರಿಗೆ ಬೆಂಬಲ ಪತ್ರವನ್ನು ನೀಡಿದ ನಂತರ ರಾಘವ್ ಚಡ್ಡಾ ಅವರನ್ನು ಆಗಸ್ಟ್ 11ರಂದು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ವಂಚನೆ ಮಾಡುವ ಮೂಲಕ ಸಂಸದರ ಸವಲತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಚಡ್ಡಾ ವಿರುದ್ಧ ಆರೋಪಿಸಲಾಗಿದೆ.

ವಾಸ್ತವವಾಗಿ, ಚಡ್ಡಾ ಅವರು ತಮ್ಮ ಪತ್ರದಲ್ಲಿ ಸಹಿಯನ್ನು ತೋರಿಸಿರುವ ಐವರು ಸಂಸದರು ತಮ್ಮ ಒಪ್ಪಿಗೆಯಿಲ್ಲದೆ ದೆಹಲಿ ಸೇವೆಗಳ ಮಸೂದೆಯನ್ನು ಆಯ್ಕೆ ಸಮಿತಿಗೆ ಕಳುಹಿಸುವ ಪ್ರಸ್ತಾವನೆಯಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಪ್ರಸ್ತಾವನೆಯನ್ನು ಆಪ್ ಸಂಸದ ರಾಘವ್ ಚಡ್ಡಾ ಮಂಡಿಸಿದ್ದರು. ಈ ಪ್ರಸ್ತಾಪಕ್ಕೆ ಬಿಜೆಪಿಯ ಮೂವರು ಸಂಸದರು ವಿರೋಧ ವ್ಯಕ್ತಪಡಿಸಿದ್ದರು.

ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಇಂದು ರಾಘವ್ ಚಡ್ಡಾ ಅವರ ವಾಪಸಾತಿಗೆ ಉಪಾಧ್ಯಕ್ಷರ ಮುಂದೆ ಪ್ರಸ್ತಾವನೆಯನ್ನು ಮಂಡಿಸಿದ್ದು ಅದರ ಮೇಲೆ ಉಪಾಧ್ಯಕ್ಷ ಜಗದೀಪ್ ಧನಕರ್ ಅವರು ಎಎಪಿ ಸಂಸದ ರಾಘವ್ ಚಡ್ಡಾ ಅವರ ಅಮಾನತು ರದ್ದುಗೊಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಸದನದಲ್ಲಿ ತನಿಖೆಗೆ ಆದೇಶಿಸುವುದರೊಂದಿಗೆ, ವರದಿ ಬರುವವರೆಗೆ ಚಡ್ಡಾ ಅವರನ್ನು ಅಮಾನತುಗೊಳಿಸಲಾಯಿತು. ರಾಜ್ಯಸಭೆಯಿಂದ ಅಮಾನತುಗೊಂಡ ನಂತರ, ರಾಘವ್ ಚಡ್ಡಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

5 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

5 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

5 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago