ರಾಷ್ಟ್ರೀಯ

ರಾಘವ್ ಚಡ್ಡಾ ಅಮಾನತು ಹಿಂಪಡೆದ ಉಪಾಧ್ಯಕ್ಷ ಜಗದೀಪ್ ಧಂಖರ್!

ನವದೆಹಲಿ : ರಾಜ್ಯಸಭೆಯಿಂದ ಅಮಾನತುಗೊಂಡಿದ್ದ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರ ಅಮಾನತನ್ನು ಉಪಾಧ್ಯಕ್ಷ ಜಗದೀಪ್‌ ಧಂಖರ್‌ ಹಿಂಪಡೆದಿದ್ದಾರೆ.

ದೆಹಲಿಯಲ್ಲಿ ಕೇಂದ್ರೀಯ ಕೇಡರ್ ಅಧಿಕಾರಿಗಳ ಪೋಸ್ಟಿಂಗ್ ಮತ್ತು ವರ್ಗಾವಣೆಯ ವಿಷಯದ ಕುರಿತು ಮಾಡಿದ ಕಾನೂನಿಗೆ ಕೆಲವು ಸದಸ್ಯರಿಗೆ ಬೆಂಬಲ ಪತ್ರವನ್ನು ನೀಡಿದ ನಂತರ ರಾಘವ್ ಚಡ್ಡಾ ಅವರನ್ನು ಆಗಸ್ಟ್ 11ರಂದು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ವಂಚನೆ ಮಾಡುವ ಮೂಲಕ ಸಂಸದರ ಸವಲತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಚಡ್ಡಾ ವಿರುದ್ಧ ಆರೋಪಿಸಲಾಗಿದೆ.

ವಾಸ್ತವವಾಗಿ, ಚಡ್ಡಾ ಅವರು ತಮ್ಮ ಪತ್ರದಲ್ಲಿ ಸಹಿಯನ್ನು ತೋರಿಸಿರುವ ಐವರು ಸಂಸದರು ತಮ್ಮ ಒಪ್ಪಿಗೆಯಿಲ್ಲದೆ ದೆಹಲಿ ಸೇವೆಗಳ ಮಸೂದೆಯನ್ನು ಆಯ್ಕೆ ಸಮಿತಿಗೆ ಕಳುಹಿಸುವ ಪ್ರಸ್ತಾವನೆಯಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಪ್ರಸ್ತಾವನೆಯನ್ನು ಆಪ್ ಸಂಸದ ರಾಘವ್ ಚಡ್ಡಾ ಮಂಡಿಸಿದ್ದರು. ಈ ಪ್ರಸ್ತಾಪಕ್ಕೆ ಬಿಜೆಪಿಯ ಮೂವರು ಸಂಸದರು ವಿರೋಧ ವ್ಯಕ್ತಪಡಿಸಿದ್ದರು.

ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಇಂದು ರಾಘವ್ ಚಡ್ಡಾ ಅವರ ವಾಪಸಾತಿಗೆ ಉಪಾಧ್ಯಕ್ಷರ ಮುಂದೆ ಪ್ರಸ್ತಾವನೆಯನ್ನು ಮಂಡಿಸಿದ್ದು ಅದರ ಮೇಲೆ ಉಪಾಧ್ಯಕ್ಷ ಜಗದೀಪ್ ಧನಕರ್ ಅವರು ಎಎಪಿ ಸಂಸದ ರಾಘವ್ ಚಡ್ಡಾ ಅವರ ಅಮಾನತು ರದ್ದುಗೊಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಸದನದಲ್ಲಿ ತನಿಖೆಗೆ ಆದೇಶಿಸುವುದರೊಂದಿಗೆ, ವರದಿ ಬರುವವರೆಗೆ ಚಡ್ಡಾ ಅವರನ್ನು ಅಮಾನತುಗೊಳಿಸಲಾಯಿತು. ರಾಜ್ಯಸಭೆಯಿಂದ ಅಮಾನತುಗೊಂಡ ನಂತರ, ರಾಘವ್ ಚಡ್ಡಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago