ರಾಷ್ಟ್ರೀಯ

ರಾಘವ್ ಚಡ್ಡಾ ಅಮಾನತು ಹಿಂಪಡೆದ ಉಪಾಧ್ಯಕ್ಷ ಜಗದೀಪ್ ಧಂಖರ್!

ನವದೆಹಲಿ : ರಾಜ್ಯಸಭೆಯಿಂದ ಅಮಾನತುಗೊಂಡಿದ್ದ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರ ಅಮಾನತನ್ನು ಉಪಾಧ್ಯಕ್ಷ ಜಗದೀಪ್‌ ಧಂಖರ್‌ ಹಿಂಪಡೆದಿದ್ದಾರೆ.

ದೆಹಲಿಯಲ್ಲಿ ಕೇಂದ್ರೀಯ ಕೇಡರ್ ಅಧಿಕಾರಿಗಳ ಪೋಸ್ಟಿಂಗ್ ಮತ್ತು ವರ್ಗಾವಣೆಯ ವಿಷಯದ ಕುರಿತು ಮಾಡಿದ ಕಾನೂನಿಗೆ ಕೆಲವು ಸದಸ್ಯರಿಗೆ ಬೆಂಬಲ ಪತ್ರವನ್ನು ನೀಡಿದ ನಂತರ ರಾಘವ್ ಚಡ್ಡಾ ಅವರನ್ನು ಆಗಸ್ಟ್ 11ರಂದು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ವಂಚನೆ ಮಾಡುವ ಮೂಲಕ ಸಂಸದರ ಸವಲತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಚಡ್ಡಾ ವಿರುದ್ಧ ಆರೋಪಿಸಲಾಗಿದೆ.

ವಾಸ್ತವವಾಗಿ, ಚಡ್ಡಾ ಅವರು ತಮ್ಮ ಪತ್ರದಲ್ಲಿ ಸಹಿಯನ್ನು ತೋರಿಸಿರುವ ಐವರು ಸಂಸದರು ತಮ್ಮ ಒಪ್ಪಿಗೆಯಿಲ್ಲದೆ ದೆಹಲಿ ಸೇವೆಗಳ ಮಸೂದೆಯನ್ನು ಆಯ್ಕೆ ಸಮಿತಿಗೆ ಕಳುಹಿಸುವ ಪ್ರಸ್ತಾವನೆಯಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಪ್ರಸ್ತಾವನೆಯನ್ನು ಆಪ್ ಸಂಸದ ರಾಘವ್ ಚಡ್ಡಾ ಮಂಡಿಸಿದ್ದರು. ಈ ಪ್ರಸ್ತಾಪಕ್ಕೆ ಬಿಜೆಪಿಯ ಮೂವರು ಸಂಸದರು ವಿರೋಧ ವ್ಯಕ್ತಪಡಿಸಿದ್ದರು.

ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಇಂದು ರಾಘವ್ ಚಡ್ಡಾ ಅವರ ವಾಪಸಾತಿಗೆ ಉಪಾಧ್ಯಕ್ಷರ ಮುಂದೆ ಪ್ರಸ್ತಾವನೆಯನ್ನು ಮಂಡಿಸಿದ್ದು ಅದರ ಮೇಲೆ ಉಪಾಧ್ಯಕ್ಷ ಜಗದೀಪ್ ಧನಕರ್ ಅವರು ಎಎಪಿ ಸಂಸದ ರಾಘವ್ ಚಡ್ಡಾ ಅವರ ಅಮಾನತು ರದ್ದುಗೊಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಸದನದಲ್ಲಿ ತನಿಖೆಗೆ ಆದೇಶಿಸುವುದರೊಂದಿಗೆ, ವರದಿ ಬರುವವರೆಗೆ ಚಡ್ಡಾ ಅವರನ್ನು ಅಮಾನತುಗೊಳಿಸಲಾಯಿತು. ರಾಜ್ಯಸಭೆಯಿಂದ ಅಮಾನತುಗೊಂಡ ನಂತರ, ರಾಘವ್ ಚಡ್ಡಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago