ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಹಠಾತ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸೇನಾ ವಾಹನದ ಮೇಲೆ ನಡೆಸಿದ ದಾಳಿಯ ಹೊಣೆಯನ್ನು ಉಗ್ರ ಸಂಘಟನೆ ಪಿಎಎಫ್ಎಫ್ ಹೊತ್ತುಕೊಂಡಿದೆ.
ಏನಿದು ಪಿಎಎಫ್ಎಫ್?
People’s Anti-Fascist Front ಅನ್ನೋದು PAFFನ ವಿಸೃತ ರೂಪವಾಗಿದೆ. ಈ ಭಯೋತ್ಪಾದಕ ಸಂಘಟನೆ ಈ ಹಿಂದೆಯೂ ಹಲವು ಬಾರಿ ಸೇನೆ ಮೇಲೆ ದಾಳಿಗಳನ್ನು ನಡೆಸಿತ್ತು. ಈ ಸಂಘಟನೆ ಜಮ್ಮು ಮತ್ತು ಕಾಶ್ಮೀರ ರಾಜ್ಯಾದ್ಯಂತ ಸಕ್ರಿಯವಾಗಿದೆ.
ಪಿಎಎಫ್ಎಫ್ ಸಂಘಟನೆಯ ಪ್ರಮುಖ ಅಂಶಗಳು ಇಂತಿವೆ:
1. ಪಿಎಎಫ್ಎಫ್ ಸಂಘಟನೆಯು ಲಷ್ಕರ್ – ಇ – ತೊಯ್ಬಾ ಭಯೋತ್ಪಾದಕ ಸಂಘಟನೆಯ ಒಂದು ವಿಭಾಗ. ಈ ಸಂಘಟನೆಯು ಮೊದಲ ಬಾರಿಗೆ ಕಾಣಿಸಿಕೊಂಡಿದ್ದು 2019ರಲ್ಲಿ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ ಆರ್ಟಿಕಲ್ 370 ರದ್ದತಿ ಬಳಿಕ 2019ರ ಆಗಸ್ಟ್ನಲ್ಲಿ ಈ ಸಂಘಟನೆ ತನ್ನ ಚಟುವಟಿಕೆ ಮೂಲಕ ಗಮನ ಸೆಳೆಯಿತು.
2. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯಾದ್ಯಂತ ನಡೆದ ಹಲವು ಭಯೋತ್ಪಾದಕ ದಾಳಿಗಳಲ್ಲಿ ಪಿಎಎಫ್ಎಫ್ ಸಂಘಟನೆಯ ಕೈವಾಡ ಸಾಬೀತಾಗಿದೆ. ಸೈನಿಕರು, ಭದ್ರತಾ ಪಡೆಗಳು ಹಾಗೂ ಜನ ಸಾಮಾನ್ಯರ ವಸತಿ ಪ್ರದೇಶಗಳಲ್ಲೂ ಈ ಭಯೋತ್ಪಾದಕ ಸಂಘಟನೆ ದಾಳಿ ನಡೆಸಿದೆ.
3. ಬಾಡಿ ಕ್ಯಾಮ್ ಬಳಸುವ ಹೈಟೆಕ್ ಸಂಘಟನೆ!: ಪಿಎಎಫ್ಎಫ್ ಸಂಘಟನೆಯ ಉಗ್ರಗಾಮಿಗಳು ತಾವು ದಾಳಿ ನಡೆಸುವಾಗ ತಮ್ಮ ದೇಹಕ್ಕೆ ಬಾಡಿ ಕ್ಯಾಮ್ ಅಳವಡಿಕೆ ಮಾಡಿಕೊಂಡಿರುತ್ತಾರೆ. ಈ ಬಾಡಿ ಕ್ಯಾಮ್ ಮೂಲಕವೇ ಈ ಉಗ್ರ ಸಂಘಟನೆ ವಿಶಿಷ್ಟವಾಗಿ ಗುರ್ತಿಸಿಕೊಂಡಿದೆ. ಬಾಡಿ ಕ್ಯಾಮ್ನಲ್ಲಿ ಉಗ್ರರು ದಾಳಿ ನಡೆಸುವ ದೃಶ್ಯ ಹಾಗೂ ಕೆಲವು ವೇಳೆ ಉಗ್ರರು ಹತ್ಯೆಗೀಡಾಗುವ ದೃಶ್ಯಗಳೂ ಚಿತ್ರೀಕರಣ ಆಗಬಹುದು. ನಂತರ ಈ ದೃಶ್ಯಗಳನ್ನೇ ತಮ್ಮ ಪರ ವಾದ ಮಾಡಲು ತಿರುಚಿ ಬಳಕೆ ಮಾಡಿಕೊಳ್ಳುತ್ತಾರೆ!
4. 2023ರ ಏಪ್ರಿಲ್ನಲ್ಲೂ ಪಿಎಎಫ್ಎಫ್ ಉಗ್ರರು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದರು. ಈ ದೃಶ್ಯಗಳನ್ನು ಬಾಡಿ ಕ್ಯಾಮ್ನಲ್ಲಿ ಸೆರೆ ಹಿಡಿದಿದ್ದರು. ಇತ್ತೀಚೆಗೆ ಲಷ್ಕರ್ – ಇ – ತೊಯ್ಬಾ ಉಗ್ರ ಸಂಘಟನೆ ಈ ವಿಡಿಯೋವನ್ನ ಬಿಡುಗಡೆ ಮಾಡಿತ್ತು. ಭಯೋತ್ಪಾದಕರು ದಾಳಿ ನಡೆಸಿದ ಬಳಿಕ ಸೈನಿಕರ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯವ ದೃಶ್ಯಗಳು ಇದರಲ್ಲಿ ಇದ್ದವು.
5. ಭಾರತದ ಭಯೋತ್ಪಾದನಾ ನಿಗ್ರಹ ಕಾಯ್ದೆಯ ಅಡಿ ಪಟ್ಟಿ ಮಾಡಲಾಗಿರುವ ಭಯೋತ್ಪಾದಕ ಸಂಘಟನೆಗಳ ಪೈಕಿ ಲಷ್ಕರ್ – ಇ – ತೊಯ್ಬಾ ಜೊತೆಯಲ್ಲೇ ಪಿಎಎಫ್ಎಫ್ ಸಂಘಟನೆಯನ್ನೂ ಸೇರಿಸಲಾಗಿದೆ. ಈ ಕಾಯ್ದೆಯ ಸೆಕ್ಷನ್ 35ರ ಅಡಿ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಲಾಗಿದೆ.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…