ರಾಷ್ಟ್ರೀಯ

ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದು ನಾವೇ: ಪಿಎಎಫ್‌ಎಫ್ ಉಗ್ರ ಸಂಘಟನೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಹಠಾತ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸೇನಾ ವಾಹನದ ಮೇಲೆ ನಡೆಸಿದ ದಾಳಿಯ ಹೊಣೆಯನ್ನು ಉಗ್ರ ಸಂಘಟನೆ ಪಿಎಎಫ್‌ಎಫ್ ಹೊತ್ತುಕೊಂಡಿದೆ.

ಏನಿದು ಪಿಎಎಫ್‌ಎಫ್?

People’s Anti-Fascist Front ಅನ್ನೋದು PAFFನ ವಿಸೃತ ರೂಪವಾಗಿದೆ. ಈ ಭಯೋತ್ಪಾದಕ ಸಂಘಟನೆ ಈ ಹಿಂದೆಯೂ ಹಲವು ಬಾರಿ ಸೇನೆ ಮೇಲೆ ದಾಳಿಗಳನ್ನು ನಡೆಸಿತ್ತು. ಈ ಸಂಘಟನೆ ಜಮ್ಮು ಮತ್ತು ಕಾಶ್ಮೀರ ರಾಜ್ಯಾದ್ಯಂತ ಸಕ್ರಿಯವಾಗಿದೆ.

ಪಿಎಎಫ್‌ಎಫ್ ಸಂಘಟನೆಯ ಪ್ರಮುಖ ಅಂಶಗಳು ಇಂತಿವೆ:

1. ಪಿಎಎಫ್‌ಎಫ್ ಸಂಘಟನೆಯು ಲಷ್ಕರ್ – ಇ – ತೊಯ್ಬಾ ಭಯೋತ್ಪಾದಕ ಸಂಘಟನೆಯ ಒಂದು ವಿಭಾಗ. ಈ ಸಂಘಟನೆಯು ಮೊದಲ ಬಾರಿಗೆ ಕಾಣಿಸಿಕೊಂಡಿದ್ದು 2019ರಲ್ಲಿ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ ಆರ್ಟಿಕಲ್ 370 ರದ್ದತಿ ಬಳಿಕ 2019ರ ಆಗಸ್ಟ್‌ನಲ್ಲಿ ಈ ಸಂಘಟನೆ ತನ್ನ ಚಟುವಟಿಕೆ ಮೂಲಕ ಗಮನ ಸೆಳೆಯಿತು.

2. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯಾದ್ಯಂತ ನಡೆದ ಹಲವು ಭಯೋತ್ಪಾದಕ ದಾಳಿಗಳಲ್ಲಿ ಪಿಎಎಫ್‌ಎಫ್ ಸಂಘಟನೆಯ ಕೈವಾಡ ಸಾಬೀತಾಗಿದೆ. ಸೈನಿಕರು, ಭದ್ರತಾ ಪಡೆಗಳು ಹಾಗೂ ಜನ ಸಾಮಾನ್ಯರ ವಸತಿ ಪ್ರದೇಶಗಳಲ್ಲೂ ಈ ಭಯೋತ್ಪಾದಕ ಸಂಘಟನೆ ದಾಳಿ ನಡೆಸಿದೆ.

3. ಬಾಡಿ ಕ್ಯಾಮ್ ಬಳಸುವ ಹೈಟೆಕ್ ಸಂಘಟನೆ!: ಪಿಎಎಫ್‌ಎಫ್ ಸಂಘಟನೆಯ ಉಗ್ರಗಾಮಿಗಳು ತಾವು ದಾಳಿ ನಡೆಸುವಾಗ ತಮ್ಮ ದೇಹಕ್ಕೆ ಬಾಡಿ ಕ್ಯಾಮ್ ಅಳವಡಿಕೆ ಮಾಡಿಕೊಂಡಿರುತ್ತಾರೆ. ಈ ಬಾಡಿ ಕ್ಯಾಮ್ ಮೂಲಕವೇ ಈ ಉಗ್ರ ಸಂಘಟನೆ ವಿಶಿಷ್ಟವಾಗಿ ಗುರ್ತಿಸಿಕೊಂಡಿದೆ. ಬಾಡಿ ಕ್ಯಾಮ್‌ನಲ್ಲಿ ಉಗ್ರರು ದಾಳಿ ನಡೆಸುವ ದೃಶ್ಯ ಹಾಗೂ ಕೆಲವು ವೇಳೆ ಉಗ್ರರು ಹತ್ಯೆಗೀಡಾಗುವ ದೃಶ್ಯಗಳೂ ಚಿತ್ರೀಕರಣ ಆಗಬಹುದು. ನಂತರ ಈ ದೃಶ್ಯಗಳನ್ನೇ ತಮ್ಮ ಪರ ವಾದ ಮಾಡಲು ತಿರುಚಿ ಬಳಕೆ ಮಾಡಿಕೊಳ್ಳುತ್ತಾರೆ!

4. 2023ರ ಏಪ್ರಿಲ್‌ನಲ್ಲೂ ಪಿಎಎಫ್‌ಎಫ್ ಉಗ್ರರು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದರು. ಈ ದೃಶ್ಯಗಳನ್ನು ಬಾಡಿ ಕ್ಯಾಮ್‌ನಲ್ಲಿ ಸೆರೆ ಹಿಡಿದಿದ್ದರು. ಇತ್ತೀಚೆಗೆ ಲಷ್ಕರ್ – ಇ – ತೊಯ್ಬಾ ಉಗ್ರ ಸಂಘಟನೆ ಈ ವಿಡಿಯೋವನ್ನ ಬಿಡುಗಡೆ ಮಾಡಿತ್ತು. ಭಯೋತ್ಪಾದಕರು ದಾಳಿ ನಡೆಸಿದ ಬಳಿಕ ಸೈನಿಕರ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯವ ದೃಶ್ಯಗಳು ಇದರಲ್ಲಿ ಇದ್ದವು.

5. ಭಾರತದ ಭಯೋತ್ಪಾದನಾ ನಿಗ್ರಹ ಕಾಯ್ದೆಯ ಅಡಿ ಪಟ್ಟಿ ಮಾಡಲಾಗಿರುವ ಭಯೋತ್ಪಾದಕ ಸಂಘಟನೆಗಳ ಪೈಕಿ ಲಷ್ಕರ್ – ಇ – ತೊಯ್ಬಾ ಜೊತೆಯಲ್ಲೇ ಪಿಎಎಫ್‌ಎಫ್ ಸಂಘಟನೆಯನ್ನೂ ಸೇರಿಸಲಾಗಿದೆ. ಈ ಕಾಯ್ದೆಯ ಸೆಕ್ಷನ್ 35ರ ಅಡಿ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಲಾಗಿದೆ.

andolanait

Recent Posts

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

31 mins ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

1 hour ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

3 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

4 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

5 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

5 hours ago