ರಾಷ್ಟ್ರೀಯ

ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದು ನಾವೇ: ಪಿಎಎಫ್‌ಎಫ್ ಉಗ್ರ ಸಂಘಟನೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಹಠಾತ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸೇನಾ ವಾಹನದ ಮೇಲೆ ನಡೆಸಿದ ದಾಳಿಯ ಹೊಣೆಯನ್ನು ಉಗ್ರ ಸಂಘಟನೆ ಪಿಎಎಫ್‌ಎಫ್ ಹೊತ್ತುಕೊಂಡಿದೆ.

ಏನಿದು ಪಿಎಎಫ್‌ಎಫ್?

People’s Anti-Fascist Front ಅನ್ನೋದು PAFFನ ವಿಸೃತ ರೂಪವಾಗಿದೆ. ಈ ಭಯೋತ್ಪಾದಕ ಸಂಘಟನೆ ಈ ಹಿಂದೆಯೂ ಹಲವು ಬಾರಿ ಸೇನೆ ಮೇಲೆ ದಾಳಿಗಳನ್ನು ನಡೆಸಿತ್ತು. ಈ ಸಂಘಟನೆ ಜಮ್ಮು ಮತ್ತು ಕಾಶ್ಮೀರ ರಾಜ್ಯಾದ್ಯಂತ ಸಕ್ರಿಯವಾಗಿದೆ.

ಪಿಎಎಫ್‌ಎಫ್ ಸಂಘಟನೆಯ ಪ್ರಮುಖ ಅಂಶಗಳು ಇಂತಿವೆ:

1. ಪಿಎಎಫ್‌ಎಫ್ ಸಂಘಟನೆಯು ಲಷ್ಕರ್ – ಇ – ತೊಯ್ಬಾ ಭಯೋತ್ಪಾದಕ ಸಂಘಟನೆಯ ಒಂದು ವಿಭಾಗ. ಈ ಸಂಘಟನೆಯು ಮೊದಲ ಬಾರಿಗೆ ಕಾಣಿಸಿಕೊಂಡಿದ್ದು 2019ರಲ್ಲಿ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ ಆರ್ಟಿಕಲ್ 370 ರದ್ದತಿ ಬಳಿಕ 2019ರ ಆಗಸ್ಟ್‌ನಲ್ಲಿ ಈ ಸಂಘಟನೆ ತನ್ನ ಚಟುವಟಿಕೆ ಮೂಲಕ ಗಮನ ಸೆಳೆಯಿತು.

2. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯಾದ್ಯಂತ ನಡೆದ ಹಲವು ಭಯೋತ್ಪಾದಕ ದಾಳಿಗಳಲ್ಲಿ ಪಿಎಎಫ್‌ಎಫ್ ಸಂಘಟನೆಯ ಕೈವಾಡ ಸಾಬೀತಾಗಿದೆ. ಸೈನಿಕರು, ಭದ್ರತಾ ಪಡೆಗಳು ಹಾಗೂ ಜನ ಸಾಮಾನ್ಯರ ವಸತಿ ಪ್ರದೇಶಗಳಲ್ಲೂ ಈ ಭಯೋತ್ಪಾದಕ ಸಂಘಟನೆ ದಾಳಿ ನಡೆಸಿದೆ.

3. ಬಾಡಿ ಕ್ಯಾಮ್ ಬಳಸುವ ಹೈಟೆಕ್ ಸಂಘಟನೆ!: ಪಿಎಎಫ್‌ಎಫ್ ಸಂಘಟನೆಯ ಉಗ್ರಗಾಮಿಗಳು ತಾವು ದಾಳಿ ನಡೆಸುವಾಗ ತಮ್ಮ ದೇಹಕ್ಕೆ ಬಾಡಿ ಕ್ಯಾಮ್ ಅಳವಡಿಕೆ ಮಾಡಿಕೊಂಡಿರುತ್ತಾರೆ. ಈ ಬಾಡಿ ಕ್ಯಾಮ್ ಮೂಲಕವೇ ಈ ಉಗ್ರ ಸಂಘಟನೆ ವಿಶಿಷ್ಟವಾಗಿ ಗುರ್ತಿಸಿಕೊಂಡಿದೆ. ಬಾಡಿ ಕ್ಯಾಮ್‌ನಲ್ಲಿ ಉಗ್ರರು ದಾಳಿ ನಡೆಸುವ ದೃಶ್ಯ ಹಾಗೂ ಕೆಲವು ವೇಳೆ ಉಗ್ರರು ಹತ್ಯೆಗೀಡಾಗುವ ದೃಶ್ಯಗಳೂ ಚಿತ್ರೀಕರಣ ಆಗಬಹುದು. ನಂತರ ಈ ದೃಶ್ಯಗಳನ್ನೇ ತಮ್ಮ ಪರ ವಾದ ಮಾಡಲು ತಿರುಚಿ ಬಳಕೆ ಮಾಡಿಕೊಳ್ಳುತ್ತಾರೆ!

4. 2023ರ ಏಪ್ರಿಲ್‌ನಲ್ಲೂ ಪಿಎಎಫ್‌ಎಫ್ ಉಗ್ರರು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದರು. ಈ ದೃಶ್ಯಗಳನ್ನು ಬಾಡಿ ಕ್ಯಾಮ್‌ನಲ್ಲಿ ಸೆರೆ ಹಿಡಿದಿದ್ದರು. ಇತ್ತೀಚೆಗೆ ಲಷ್ಕರ್ – ಇ – ತೊಯ್ಬಾ ಉಗ್ರ ಸಂಘಟನೆ ಈ ವಿಡಿಯೋವನ್ನ ಬಿಡುಗಡೆ ಮಾಡಿತ್ತು. ಭಯೋತ್ಪಾದಕರು ದಾಳಿ ನಡೆಸಿದ ಬಳಿಕ ಸೈನಿಕರ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯವ ದೃಶ್ಯಗಳು ಇದರಲ್ಲಿ ಇದ್ದವು.

5. ಭಾರತದ ಭಯೋತ್ಪಾದನಾ ನಿಗ್ರಹ ಕಾಯ್ದೆಯ ಅಡಿ ಪಟ್ಟಿ ಮಾಡಲಾಗಿರುವ ಭಯೋತ್ಪಾದಕ ಸಂಘಟನೆಗಳ ಪೈಕಿ ಲಷ್ಕರ್ – ಇ – ತೊಯ್ಬಾ ಜೊತೆಯಲ್ಲೇ ಪಿಎಎಫ್‌ಎಫ್ ಸಂಘಟನೆಯನ್ನೂ ಸೇರಿಸಲಾಗಿದೆ. ಈ ಕಾಯ್ದೆಯ ಸೆಕ್ಷನ್ 35ರ ಅಡಿ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಲಾಗಿದೆ.

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

6 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

6 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

6 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

7 hours ago